BengaluruPolitics

ನವೆಂಬರ್‌ನಲ್ಲಿ ಜಾತಿಗಣತಿ ನನ್ನ ಕೈಸೇರುತ್ತೆ; ಸಿಎಂ ಸಿದ್ದರಾಮಯ್ಯ

ಮೈಸೂರು; ಜಾತಿವಾರು ಜನಗಣತಿಯನ್ನು ಇತ್ತೀಚೆಗೆ ಬಿಹಾರದಲ್ಲಿ ಬಿಡುಗಡೆ  ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2015ರಲ್ಲಿ ಜಾತಿವಾರು ಜನಗಣತಿ ಆಗಿತ್ತು. ಅದನ್ನೂ ಬಿಡಗುಡೆ ಮಾಡಬೇಕು ಎಂದು ಕರ್ನಾಟಕದ ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನವೆಂಬರ್ ತಿಂಗಳಿನಲ್ಲಿ ಜಾತಿ ಗಣತಿ ವರದಿ ನನ್ನ ಕೈ ಸೇರಬಹುದು. ಆ ನಂತರ ಪರಿಶೀಲಿಸಿ, ಬಿಡುಗಡೆ ಮಾಡಬೇಕೆ, ಬೇಡವೇ ಎಂಬುದರ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಜನಗಣತಿ ಮಾಡುವ ಸಮಿತಿ ಅಧ್ಯಕ್ಷರು ಬದಲಾಗಿದ್ದಾರೆ, ಹೀಗಾಗಿ ಅವರು ನವೆಂಬರ್​ನಲ್ಲಿ ಜಾತಿ ಗಣತಿ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಜಾತಿ ಜನಗಣತಿ ಸಮಾಜಕ್ಕೆ ಮಾರಕವಲ್ಲ, ಯಾವ ಸಮೂದಾಯ ಎಷ್ಟಿದೆ ಎಂಬುವುದನ್ನು ಅಂಕಿ-ಅಂಶಗಳು ಸರ್ಕಾರಕ್ಕೆ ಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Share Post