HealthLifestylePolitics

ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವೇಗೌಡ ದಂಪತಿ ಭೇಟಿ; ಬೆಳ್ಳಂಬೆಳಗ್ಗೆ ವಿಶೇಷ ಪೂಜೆ

ಮಂಗಳೂರು; ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಅವರ ಕುಟುಂಬಕ್ಕೆ ದೇವರ ಮೇಲೆ ಅಪಾರ ಭಕ್ತಿ. ಆಗಾಗ ಹಲವಾರು ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ, ಹೋಮ, ಹವನ ಮಾಡಿಸುತ್ತಿರುತ್ತಾರೆ. ಇದೀಗ ದೇವೇಗೌಡ ದಂಪತಿ ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿತ್ತು. ಇಂದು ಮುಂಜಾನೆಯೇ ಶ್ರೀಕ್ಷೇತ್ರಕ್ಕೆ ಆಗಮಿಸಿದ ದೇವೇಗೌಡ ದಂಪತಿ, ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ನಿನ್ನೆ ಮಧ್ಯಾಹ್ನವೇ ಇವರು ಹೆಲಿಕಾಪ್ಟರ್‌ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಬೇಕಿತ್ತು. ಆದ್ರೆ ಮೋಡ ಕವಿದ ವಾತಾವರಣ ಇದ್ದುದರಿಂದ ಹೆಲಿಕಾಪ್ಟರ್‌ ಟೇಕಾಫ್‌ ಮಾಡೋದಕ್ಕೆ ಆಗಲಿಲ್ಲ. ಹೀಗಾಗಿ ದೇವೇಗೌಡ ದಂಪತಿ ವಿಮಾನದ ಮೂಲಕ ಮಂಗಳೂರಿಗೆ ತಡರಾತ್ರಿ ಆಗಮಿಸಿದರು. ನಂತರ ಅಲ್ಲಿಂದ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ ತಲುಪಿದರು.

ಇಂದು ಬೆಳಗ್ಗೆಯೇ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ನೆರವೇರಿಸಿದರು.

 

Share Post