BengaluruPolitics

ಡಿಸೆಂಬರ್‌ ವೇಳೆಗೆ ರಾಜ್ಯಕ್ಕೆ ಕತ್ತಲೆ ಭಾಗ್ಯ; ಸರ್ಕಾರದ ವಿರುದ್ಧ ಹೆಚ್ಡಿಕೆ ಲೇವಡಿ

ಬೆಂಗಳೂರು; ರೈತರಿಗೆ ಸರಿಯಾಗಿ ವಿದ್ಯುತ್‌ ಪೂರೈಕೆ ಮಾಡದೇ ರಾಜ್ಯಕ್ಕೆ ಕಾಂಗ್ರೆಸ್‌ ಸರ್ಕಾರ ಕತ್ತಲೆ ಭಾಗ್ಯ ಕರುಣಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗಾಗಲೇ ಐದು ಗ್ಯಾರೆಂಟಿಗಳನ್ನು ಅರೆಬರೆಯಾಗಿ ನೀಡಿ ಕೈತೊಳೆದುಕೊಂಡಿದೆ. ಇನ್ನು ಶೀಘ್ರವೇ ಅದು ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಕೊಡೋದಕ್ಕೆ ಸಿದ್ಧತೆ ನಡೆಸಿದೆ. ಡಿಸೆಂಬರ್‌ ವೇಳೆಗೆ ಜನರನ್ನು ಕತ್ತಲೆ ಭಾಗ್ಯದ ಕೂಪಕ್ಕೆ ತಳ್ಳೋದು ಗ್ಯಾರೆಂಟಿ ಎಂದು ಲೇವಡಿ ಮಾಡಿದ್ದಾರೆ.

Share Post