BengaluruNational

ತಮಿಳುನಾಡಿಗೆ ಮತ್ತೆ ದಿನಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ

ನವದೆಹಲಿ; ಇಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಮತ್ತೆ ಹದಿನೈದು ದಿನ ದಿನಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಅಕ್ಟೋಬರ್‌ 16ರಿಂದ ಅಕ್ಟೋಬರ್‌ 31ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ನೀಡಲಾಗಿದೆ.

ಈ ಹಿಂದೆ ಕೂಡಾ ಹದಿನೈದು ದಿನಗಳ ಕಾಲ ನಿತ್ಯ ಮೂರು ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ನೀಡಲಾಗಿತ್ತು. ಆ ಅವಧಿ ಅಕ್ಟೋಬರ್‌ 15ಕ್ಕೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಲಾಯಿತು. ತಮಿಳುನಾಡು ಪರ ಅಧಿಕಾರಿಗಳು ಈಗ ಕರ್ನಾಟಕದಲ್ಲಿ ಮಳೆಯಾಗಿದ್ದು, ನೀರಿನ ಒಳಹರಿವು ಜಾಸ್ತಿಯಾಗಿದೆ. ಹೀಗಾಗಿ ಹೆಚ್ಚಿನ ನೀರು ಹರಿಸುವಂತೆ ಆದೇಶಿಸಬೇಕು ಎಂದು ಮನವಿ ಮಾಡಿದರು. ಆದ್ರೆ ಕರ್ನಾಟಕದ ಅಧಿಕಾರಿಗಳು ವಸ್ತುಸ್ಥಿತಿಯನ್ನು ಸಮಿತಿಗೆ ಮನವರಿಕೆ ಮಾಡಿಕೊಟ್ಟರು.

ಎರಡೂ ಕಡೆಯ ವಾದ ಆಲಿಸಿದ ನಂತರ ಮತ್ತೆ ಹದಿನೈದು ನಿತ್ಯ ಮೂರು ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಲಾಗಿದೆ.

Share Post