CrimeDistricts

ಭತ್ತದ ಗದ್ದೆಯಲ್ಲಿ ಮೂವರು ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು; ಭತ್ತದ ಗದ್ದೆಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ರಬಣಕಲ್‌ ಕ್ಯಾಂಪ್‌ ಬಳಿ ನಡೆದಿದೆ. ಹಳೇ ವೈಷ್ಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತಿಳಿದುವಂದಿದೆ.

ಮದ್ಲಾಪುರ ಗ್ರಾಮದ ಪ್ರಸಾದ್‌ ಎಂಬುವವರೇ ಕೊಲೆಯಾದ ವ್ಯಕ್ತಿ. ಮೂವರು ವ್ಯಕ್ತಿಗಳು ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಈ ಕೊಲೆ ಮಾಡಿದ್ದಾರೆ. ರಬಣಕಲ್ ಗ್ರಾಮದ ರಾಮು, ಕೇಶವ ಆರೋಪಿಗಳು ಎಂದು ತಿಳಿದುಬಂದಿದೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಮಾನ್ವಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

 

Share Post