DistrictsPolitics

ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌; ಹುಬ್ಬಳ್ಳಿಯಲ್ಲಿ ಬೆಂಬಲಿಗರಿಂದ ಘೋಷಣೆ

ಹುಬ್ಬಳ್ಳಿ; ಸಿಎಂ ಬದಲಾವಣೆ ಅಥವಾ ಮುಂದುವರಿಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಸಾಕಷ್ಟು ಜನ ಮಾತಾಡಿದ್ದಾರೆ. ಈ ಗೊಂದಲದ ನಡುವೆ ಯಾರೂ ಹೇಳಿಕೆ ನೀಡದಂತೆ ಹೈಕಮಾಂಡ್‌ ನಾಯಕರು ಎಚ್ಚರಿಕೆ ನೀಡಿ ಹೋಗಿದ್ದಾರೆ. ಇದರ ಹೊರತಾಗಿಯೂ ಸಿಎಂ ಸ್ಥಾನದ ವಿಚಾರ ಚರ್ಚೆಯಲ್ಲಿಯೇ ಇದೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು, ನಾನು ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಹೀಗಿರುವಾಗಲೇ ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್‌ಗೆ ಸ್ವಾಗತ ಕೋರಿದ ಅವರ ಬೆಂಬಲಿಗರು ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ ಎಂದು ಘೋಷಣೆ ಕೂಗಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರ ಒಂದರಲ್ಲಿ ಪಾಲ್ಗೊಳ್ಳಲು ಗದಗಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ಅವರ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ. ಜೆಸಿಬಿ ಮೂಲಕ ಅವರ ಮೇಲೆ ಹೂವಿನ ಸುರಿಮಳೆಗೈದಿದ್ದಾರೆ. ಇದೇ ವೇಳೆ ಹಲವಾರು ಬೆಂಬಲಿಗರು ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಜೈ ಎಂದು ಕೂಗಿದ್ದಾರೆ.

ಇನ್ನೊಂದೆಡೆ ಮೈಸೂರಿನಲ್ಲಿ ಮಾತನಾಡಿರುವ ಪ್ರಿಯಾಂಕ್‌ ಖರ್ಗೆ, ಹೈಕಮಾಂಡ್‌ ಸೂಚನೆ ಕೊಟ್ಟರೆ ನಾನೂ ಸಿಎಂ ಆಗಲು ಸಿದ್ಧ ಎಂದಿದ್ದಾರೆ. ಇದೆಲ್ಲಾ ನೋಡ್ತಾ ಇದ್ರೆ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಖಾತ್ರಿಯಾಗುತ್ತೆ.

 

Share Post