BengaluruCrime

ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ; ಆರೋಪಿಗೆ ನವೆಂಬರ್‌ 15ರವೆರೆಗೆ ಪೊಲೀಸ್‌ ಕಸ್ಟಡಿ

ಬೆಂಗಳೂರು; ಶನಿವಾರ ರಾತ್ರಿ ಕೊಲೆಯಾದ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ಆರೋಪಿ ಕಿರಣ್‌ಗೆ ನವೆಂಬರ್‌ 15ರವರೆಗೆ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ನಿನ್ನೆಯೇ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಇಂದು ಸಂಜೆ ಬೆಂಗಳೂರಿನ ಎರಡನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಪೊಲೀಸರು ಆರೋಪಿಯಿಂದ ಮಾಹಿತಿ ಪಡೆಯಬೇಕಿದೆ. ಹೀಗಾಗಿ, ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಅದನ್ನು ಪುರಸ್ಕರಿಸಿದ ಕೋರ್ಟ್‌ ಆರೋಪಿಯನ್ನು ನವೆಂಬರ್‌ 15ರವೆರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

 

Share Post