BengaluruPolitics

ಸದಾಶಿವ ಆಯೋಗದ ವರದಿ ಜಾರಿಗೆ ಸಿಎಂಗೆ ಮನವಿ; ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು; ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗ ನೀಡಿರುವ ವರದಿಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ನಿನ್ನೆ ಎಡಗೈ ಸಮುದಾಯದ ಸಚಿವರು, ಶಾಸಕರ ಸಭೆ ನಡೆಸಿದ್ದರು. ಈ ವಿಚಾರದ ಸಂಬಂಧ ಪರಮೇಶ್ವರ್‌ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು.

ನಾವು ಚುನಾವಣೆ ಸಂದರ್ಭದಲ್ಲಿ ಚಿತ್ರದುರ್ಗದಲ್ಲಿ  ಒಳ ಮೀಸಲಾತಿ ವಿಚಾರವಾಗಿ ಎಸ್‌ಸಿ-ಎಸ್‌ಟಿ ಸಮಾವೇಶ ಮಾಡಿದ್ದೆವು.  ಇದರಲ್ಲಿ ನಾವು 10 ಘೋಷಣೆಗಳನ್ನು ಮಾಡಿದ್ದೆವು.  ಒಳ ಮೀಸಲಾತಿ ವಿಚಾರವಾಗಿ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿ ಮಂಡನೆ ಮಾಡ್ತೀವಿ ಎಂದಿದ್ದೆವು. ಕಾರಣಾಂತರಗಳಿಂದ ಮೊದಲ ಅಧಿವೇಶನದಲ್ಲಿ ಆಗಲಿಲ್ಲ. ಹೀಗಾಗಿ ಈಗ ಸಿಎಂ ಗಮನಕ್ಕೆ ತಂದಿದ್ದು, ಬೆಳಗಾವಿ ಅಧಿವೇಶನದಲ್ಲಿ ಜಾರಿ ಮಾಡುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

 

Share Post