CrimeDistricts

ಹುಲಿವೇಷದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಬಂಧಿತರಲ್ಲಿ ಒಬ್ಬ ಕಾಂಗ್ರೆಸ್‌ ಮುಖಂಡ

ಮಂಗಳೂರು; ಪುತ್ತೂರಿನ ನೆಹರು ನಗರದಲ್ಲಿ ನಡೆಸ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಒಬ್ಬಾತ ಕಾಂಗ್ರೆಸ್‌ ಮುಖಂಡ ಎಂದು ತಿಳಿದುಬಂದಿದೆ.

ಮೃತ ಅಕ್ಷಯ್‌ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ದೇಹದಲ್ಲಿ 58 ಮಚ್ಚಿನ ಏಟುಗಳ ಬಿದ್ದಿರುವುದು ಗೊತ್ತಾಗಿದೆ. ಅಂದರೆ ಭೀಕರತೆ ಎಷ್ಟಿದೆ ಅನ್ನೋದು ಅರ್ಥವಾಗುತ್ತದೆ. ಗಾಂಜಾ ಮತ್ತಿನಲ್ಲಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಚೇತನ್, ಮನೀಶ್, ಮಂಜ, ಕೇಶವ ಪಡೀಲು ಎಂಬುವವರೇ ಬಂಧಿತ ಆರೋಪಿಗಳು. ಇದರಲ್ಲಿ ಕೇಶವ ಪಡೀಲು ಎಂಬಾತ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಎಂದು ತಿಳಿದುಬಂದಿದೆ.

Share Post