CrimeDistricts

ತುಮಕೂರು ಬಳಿ ಭೀಕರ ಅಪಘಾತ; ಇಬ್ಬರು ದಾರುಣ ಸಾವು

ತುಮಕೂರು; ತುಮಕೂರಿನ ಬಳಿ ಭೀಕರ ಅಪಘಾತವೊಂದು ನಡೆದುಹೋಗಿದೆ. ನಿಂತಿದ್ದ ಕ್ರೂಸರ್‌ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. 

ಮೃತ ವ್ಯಕ್ತಿಗಳನ್ನು ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಎಂದು ಗುರುತಿಸಲಾಗಿದೆ. ಮತ್ತೊಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಆತನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಕೊಪ್ಪಳದ ಗಂಗಾವತಿ ಮೂಲದವರು ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಅವರು ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ.

 

Share Post