CrimeDistricts

ಗ್ರಾಹಕರಿಗೆ ಸೇರಿದ 1.62 ಕೋಟಿ ರೂ. ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಅರೆಸ್ಟ್‌

ಹಾವೇರಿ; ಒಂದೂವರೆ ಕೋಟಿ ರೂಪಾಯಿ ಹೆಚ್ಚಿನ ಹಣವನ್ನು ಗ್ರಾಹಕರಿಗೆ ವಂಚನೆ ಮಾಡಿದ ಆರೋಪದ ಮೇಲೆ ಬ್ಯಾಂಕ್‌ ಮ್ಯಾನೇಜರ್‌ ರನ್ನು ಪೊಲೀಸರು ಬಂಧಿಸಿದ್ದಾರೆ. ಕುರುಬಗೊಂಡು ಗ್ರಾಮದ ಯೂನಿಯನ್ ಬ್ಯಾಂಕ್‍ನ ಹಳೆಯ ಮ್ಯಾನೇಜರ್‌ ಅರ್ಚನಾ ಬೇಟಗೇರಿ ಬಂಧಿತರು.

ಬ್ಯಾಂಕ್‍ನಲ್ಲಿ ಗ್ರಾಹಕರ ಎಫ್‍ಡಿ ಹಣ, ಚಿನ್ನದ ಲೋನ್ ಹಣ ಹಾಗೂ ಖಾತೆಗೆ ಜಮೆ ಮಾಡಿದ ಹಣಕ್ಕೆ ರಶೀದಿ ಹಾಗೂ ಎಫ್‍ಡಿಗೆ ಬಾಂಡ್ ನೀಡದೆ ವಂಚನೆ ಮಾಡಲಾಗಿತ್ತು. ಸುಮಾರು 1 ಕೋಟಿ 62 ಲಕ್ಷ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ನೂತನ ಬ್ಯಾಂಕ್‌ ಮ್ಯಾನೇಜರ್‌ ರವಿರಾಜ್‌ ಈ ಬಗ್ಗೆ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಸಿಸ್ಟೆಂಟ್ ಮ್ಯಾನೇಜರ್ ಸೇರಿ ಬ್ಯಾಂಕ್‍ನ ಇಬ್ಬರು ಸಿಬ್ಬಂದಿಯಾದ ಶಾಂತಪ್ಪ ಮತ್ತು ಪ್ರವೀಣ್ ಅವರ ವಿರುದ್ಧವೂ ಕೇಸ್‌ ದಾಖಲಿಸಲಾಗಿದ್ದು, ಪೊಲೀಸರು ಆ ಇಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

 

Share Post