BengaluruPolitics

ಡಿಕೆಶಿ ವಿರುದ್ಧದ ಸಿಬಿಐ ಕೇಸ್‌ ವಾಪಸ್‌ ವಿಚಾರ; ಸರ್ಕಾರದ ನಿರ್ಧಾರ ತಪ್ಪು ಎಂದ ಕುಮಾರಸ್ವಾಮಿ

ಬೆಂಗಳೂರು; ಡಿ.ಕೆ.ಶಿವಕುಮಾರ್‌ ವಿರುದ್ಧದ ಕೇಸ್‌ ಕೋರ್ಟ್‌ ವಿಚಾರಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಸಿಬಿಐ ವಿಚಾರಣೆ ವಾಪಸ್‌ ಪಡೆಯುವ ಸರ್ಕಾರದ ತೀರ್ಮಾನ ತಪ್ಪು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸುಪ್ರೀಂ ಕೋರ್ಟ್‌ ನೀಡಿದ್ದ ಹಲವಾರು ತೀರ್ಪುಗಳ ನಮ್ಮ ಮುಂದೆ ಇವೆ. ಇದೇ ರೀತಿಯ ವಿಷಯವಾಗಿ ಎರಡು ಬಾರಿ ಹೈಕೋರ್ಟ್‌ನಲ್ಲಿ ಕೂಡಾ ಚರ್ಚೆಯಾಗಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ವಕೀಲರಾಗಿಯೂ ಕೆಲಸ ಮಾಡಿದ್ದಾರೆ. ಹೀಗಿರುವಾಗ ಅವರ ಸಂಪುಟದಲ್ಲಿ ಇಂತಹ ನಿರ್ಧಾರವಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಈ ಸರ್ಕಾರ ದರೋಡೆಕೋರರನ್ನು ರಕ್ಷಣೆ ಮಾಡಲೆಂದೇ ಇದೆ. ಈ ಬಗ್ಗೆ ಕೋರ್ಟ್‌ ಏನು ತೀರ್ಮಾನ ತೆಗೆದುಕೊಳ್ಳುತ್ತೆ ಅಂತ ನೋಡಿ ಮತ್ತೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಇದೇ ವೇಳೆ ಹೇಳಿದ್ದಾರೆ.

Share Post