BengaluruSports

ಎರಡು ದಿನಗಳ ಬೆಂಗಳೂರು ಕಂಬಳಕ್ಕೆ ಚಾಲನೆ

ಬೆಂಗಳೂರು; ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಬೆಂಗಳೂರು ಕಂಬಳಕ್ಕೆ ಚಾಲನೆ ಸಿಕ್ಕಿದೆ. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಬೆಂಗಳೂರು ಕಂಬಳಕ್ಕೆ ಜ್ಯೋತಿ ಬೆಳಗುವ ಮೂಲಕ ಚಾಲನೆ ಕೊಟ್ಟಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿದ್ದು, ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನ ಆಗಮಿಸಿದ್ದಾರೆ. ಗಣ್ಯರು, ಸೆಲೆಬ್ರಿಟಿಗಳು ಮತ್ತು ರಾಜಕೀಯ ನಾಯಕರಿಗೂ ಆಹ್ವಾನವಿದೆ.

ಕಂಬಳದ ಹಿನ್ನೆಲೆಯಲ್ಲಿ ಅರಮನೆ ರಸ್ತೆಯಲ್ಲಿ ಟ್ರಾಫಿ ಜಾಮ್‌ ಉಂಟಾಗಿದೆ. ಟ್ರಾಫಿಕ್‌ ಸಮಸ್ಯೆ ಕಡಿಮೆ ಮಾಡಲು ಒಂದಷ್ಟು ಕ್ರಮಗಳನ್ನು ಕೂಡಾ ವಹಿಸಲಾಗಿದೆ.

ಸಂಚಾರ ಎಲ್ಲೆಲ್ಲಿ ನಿರ್ಬಂಧ..?
=================
ಅರಮನೆ ರಸ್ತೆ: ಮೈಸೂರು ಬ್ಯಾಂಕ್ ವೃತ್ತದಿಂದ ವಸಂತನಗರ ಅಂಡರ್ ಪಾಸ್ ವರೆಗೆ.
ಎಂವಿ ಜಯರಾಮ್ ರಸ್ತೆ: ಬಿಡಿಎ ಜಂಕ್ಷನ್ ಅರಮನೆ ರಸ್ತೆಯಿಂದ ಚಕ್ರವರ್ತಿ ಲೇಔಟ್‌ನಿಂದ ವಸಂತನಗರ ಅಂಡರ್‌ಪಾಸ್‌ನಿಂದ ಹಳೆ ಉದಯ ಟಿವಿ ಜಂಕ್ಷನ್‌ವರೆಗೆ. (ಎರಡೂ ದಿಕ್ಕುಗಳು)
ಬಳ್ಳಾರಿ ರಸ್ತೆ: ಮೇಖ್ರಿ ವೃತ್ತದಿಂದ ಎಲ್‌ಆರ್‌ಡಿಇ ಜಂಕ್ಷನ್‌ವರೆಗೆ.
ಕನ್ನಿಂಗ್‌ಹ್ಯಾಮ್ ರಸ್ತೆ: ಬಾಳೆಕುಂದ್ರಿ ಜಂಕ್ಷನ್‌ನಿಂದ ಲೆ ಮೆರಿಡಿಯನ್ ಅಂಡರ್‌ಪಾಸ್‌ವರೆಗೆ.
ಮಿಲ್ಲರ್ಸ್ ರಸ್ತೆ: ಹಳೆ ಉದಯ ಟಿವಿ ಜಂಕ್ಷನ್‌ನಿಂದ ಎಲ್‌ಆರ್‌ಡಿಇ ಜಂಕ್ಷನ್‌ವರೆಗೆ.
ಜಯಮಹಲ್ ರಸ್ತೆ: ಬೆಂಗಳೂರಿನ ಸುತ್ತಮುತ್ತಲಿನ ರಸ್ತೆಗಳು ಸೇರಿದಂತೆ ಜಯಮಹಲ್ ರಸ್ತೆ

Share Post