CrimeDistricts

ಬೈಕ್ ಸವಾರನ ಮೇಲೆ ಭವಾನಿ ರೇವಣ್ಣ ರೋಷಾವೇಶ

ಮೈಸೂರು; ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ. ಬಡ ಬೈಕ್ ಸವಾರನ ಮೇಲೆ ರೋಷಾವೇಶ ಪ್ರದರ್ಶಿಸಿದ್ದಾರೆ.

  ಭವಾನಿ ಅವರ ಕಾರಿಗೆ ಸಾಲಿಗ್ರಾಮದ ಬಳಿ ಬೈಕ್  ಡಿಕ್ಕಿ ಹೊಡೆದಿದೆ. ಇದರಿಂದ ಆಕ್ರೋಶಗೊಂಡಿರೋ ಭವಾನಿ, ಸಾಯೋದಕ್ಕೆ ನನ್ನ ಕಾರೇ ಬೇಕಾ ಎಂದು ಆಕ್ರೋಶ ಹೊರಹಾಕಿದ್ದಾರೆ. ಒಂದೂವರೆ ಕೋಟಿ ರೂಪಾಯಿ ಕಾರು ಡ್ಯಾಮೇಜ್ ಆಗಿದೆ. ಯಾರು ರಿಪೇರಿ ಮಾಡಿಸ್ತಾರೆ ಅಂತ ಪ್ರಶ್ನೆ ಮಾಡಿದ್ದಾರೆ. ಈ ದೃಶ್ಯಗಳು ವೈರಲ್ ಆಗುತ್ತಿದ್ದು, ಭವಾನಿ ದರ್ಪದ ವಿರುದ್ದ ನೆಟ್ಟಿಗರು ರೊಚ್ಚಿಗೆದ್ದಿದ್ದಾರೆ.

ಇನ್ನು ಈ ಸಂಬಂಧ ಭವಾನಿ ರೇವಣ್ಣ ಕಾರು ಚಾಲಕ ಮಂಜುನಾಥ್‌ ಅವರು ಅವರು ಬೈಕ್​ ಸವಾರ ಶಿವಣ್ಣ ಎನ್ನುವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279 ಅಡಿಯಲ್ಲಿ ದೂರು ದಾಖಲಿಸಿದ್ದಾರೆ

Share Post