DistrictsPolitics

ಒಗ್ಗಟ್ಟಿನ ಮಂತ್ರ ಪಠಿಸಿದ ವಿಜಯೇಂದ್ರ; ಶಾಸಕಾಂಗ ಸಭೆಗೆ ಯತ್ನಾಳ್‌, ಜಾರಕಿಹೊಳಿ ಗೈರು

ಬೆಳಗಾವಿ; ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಯಡಿಯೂರಪ್ಪ ಕೂಡಾ ಪಾಲ್ಗೊಂಡಿದ್ದರು. ಆದ್ರೆ, ಮೊದಲೇ ಹೇಳಿದಂತೆ ಯತ್ನಾಳ್‌ ಈ ಸಭೆಯಿಂದ ದೂರ ಉಳಿದಿದ್ದರು. ಇತ್ತ ರಮೇಶ್‌ ಜಾರಕಿಹೊಳಿ ಕೂಡಾ ಸಬೆಗೆ ಗೈರು ಹಾಜರಾಗಿದ್ದು ಎದ್ದು ಕಾಣುತ್ತಿತ್ತು.

ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ ಬಿಜೆಪಿಯ ಬಹುತೇಕ ಶಾಸಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಎಲ್ಲಾ ಒಗ್ಗಟ್ಟಾಗಿ ಮುಂದಕ್ಕೆ ಹೋಗೋಣ. ಯಾವುದೇ ವ್ಯತ್ಯಾಸಗಳಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡೋಣ ಎಂದು ವಿಜಯೇಂದ್ರ ಕರೆ ಕೊಟ್ಟರು.

ಲೋಕಸಭಾ ಚುನಾವಣೆಗೆ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಹೀಗಾಗಿ ಅವರ ಜೊತೆ ಹೊಂದಿಕೊಂಡು ಹೋಗಲೇಬೇಕು ಎಂದು ವಿಜಯೇಂದ್ರ ಹೇಳಿದರು. ಬೆಳಗಾವಿಯಲ್ಲಿ ಮೊದಲ ಬಾರಿ ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ನಾಳೆ ನಡೆಯುವ ಪ್ರತಿಭಟನೆಯಲ್ಲಿ 7-8 ಸಾವಿರ ಜನ ಸೇರಬಹುದು ಎಂದು ವಿಜಯೇಂದ್ರ ಇದೇ ವೇಳೆ ತಿಳಿಸಿದರು.

Share Post