Bengaluru

ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ; ಕರವೇ ಬೃಹತ್‌ ಮೆರವಣಿಗೆ

ಬೆಂಗಳೂರು; ಮಾಲ್‌, ಕಂಪನಿ, ಅಂಗಡಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಹಾಕಬೇಕೆಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಬೃಹತ್‌ ಮೆರವಣಿಗೆ ನಡೆಸುತ್ತಿದ್ದಾರೆ. ಸಾದಹಳ್ಳಿ ಗೇಟ್‌ ಬಳಿಯ ಟೋಲ್‌ ಪ್ಲಾಜಾದಿಂದ ಕಬ್ಬನ್‌ ಪಾರ್ಕ್‌ವರೆಗೆ ಮೆರವಣಿಗೆ ನಡೆಯಲಿದೆ. ನಾರಾಯಣಗೌಡ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ನಡೆಯುವ ಮಾರ್ಗದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಟ್ರಾಫಿಕ್‌ ಜಾಮ್‌ ಆಗದಂತೆ ಸೈಡ್‌ ವಾಲ್‌ಗಳನ್ನು ಅಳವಡಿಸಲಾಗಿದೆ. ಭದ್ರತೆಗಾಗಿ 1 ಎಸಿಪಿ, 6 ಇನ್ಸ್​ಪೆಕ್ಟರ್, 12 ಸಬ್ ಇನ್ಸ್​ಪೆಕ್ಟರ್ ಸೇರಿದಂತೆ 500 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ರ್ಯಾಲಿಗೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದರೆ ಕಾರ್ಯಕರ್ತರನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ 10 ಬಸ್ ವ್ಯವಸ್ಥೆ ಮಾಡಿಕೊಂಡಿಕೊಂಡಿದ್ದಾರೆ.

Share Post