CrimeDistricts

ಮೂಡಿಗೆರೆ ಬಿಇಒ ಕಚೇರಿಯಲ್ಲೇ ವ್ಯವಸ್ಥಾಪಕನ ಆತ್ಮಹತ್ಯೆ

ಚಿಕ್ಕಮಗಳೂರು; ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆ ಬಿಇಓ ಕಚೇರಿಯಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ನಿಂಗನಾಯಕ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಕಚೇರಿಗೆ ಆಗಮಿಸಿರುವ ಅವರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಆತ್ಮಹತ್ಯೆ ಮಾಡಿಕೊಂಡ ಲಿಂಗನಾಯಕ ಅವರು ಮೂಲತಃ ಕಡೂರು ತಾಲ್ಲೂಕಿನವರಾಗಿದ್ದಾರೆ. ಅವರು ಮೂಡಿಗೆರೆ ಪಟ್ಟಣದಲ್ಲಿರುವ ಬಿಇಓ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. ಮೂಡಿಗೆರೆ ಪೊಲೀಸರು ಸ್ಥಳಕ್ಕಾಗಿ ತನಿಖೆ ನಡೆಸುತ್ತಿದ್ದಾರೆ.

 

Share Post