Districts

ಸಿದ್ದರಾಮಯ್ಯ ವರುಣಾ ಬಿಟ್ಟು ನಮಗೆ ಗಂಟುಬಿದ್ದಿದ್ದಾರೆ: ಚಿಮ್ಮನಕಟ್ಟಿ ಅಸಮಾಧಾನ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಬದಾಮಿ ಕ್ಷೇತ್ರಕ್ಕೆ ಬಂದು ಹುಲಿ ಆಗಿದ್ದ ನನ್ನನ್ನ ಇಲಿ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಲು ಯೋಗ್ಯತೆ ಇಲ್ಲದಿದ್ದರೆ ಅದನ್ನು ಬಿಟ್ಟು ನಮಗ್ಯಾಕೆ ಗಂಟು ಬೀಳಬೇಕು ಎಂದು ಕ್ಷೇತ್ರದ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ ಪರ ಬದಾಮಿಯಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಅವರ ಎದುರೇ ಚಿಮ್ಮನಕಟ್ಟಿ ಅಸಮಾಧಾನ ತೋಡಿಕೊಂಡರು. ಈ ವೇಳೆ ಕಾರ್ಯಕರ್ತನೊಬ್ಬ ನೀವು ಮತ್ತೆ ಹುಲಿ ಆಗ್ತೀರಿ ಎಂದು ಕೂಗಿದ. ಅದಕ್ಕೆ ಪ್ರತಿಕ್ರಿಯಿಸಿದ ಬಿ.ಬಿ.ಚಿಮ್ಮನಕಟ್ಟಿ, ಮುಂದಿನ ಸಲ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ. ಹಿಂದಿನ ಚುನಾವಣೆಯಲ್ಲಿ ಅವರ ಪುತ್ರನ ಬಿಟ್ಟು ಸಿದ್ದರಾಮಯ್ಯಗೆ ಆ ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟಿದ್ದರೆ ಅವರು ಗೆಲ್ಲುತ್ತಿದ್ದರು. ಪುತ್ರನ ಕಾರಣಕ್ಕೆ ವರುಣಾ ಕ್ಷೇತ್ರ ಬಿಟ್ಟರು ಎಂದರು.
ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯಗಾಗಿ ಚಿಮ್ಮನಕಟ್ಟಿ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಈ ಬಾರಿಯೂ ಇಲ್ಲಿಯೇ ನಿಲ್ಲುತ್ತೇನೆಂದು ಸಿದ್ದರಾಮಯ್ಯ ಹೇಳಿದ್ದರಿಂದಾಗಿ ಚಿಮ್ಮನಕಟ್ಟಿ ಅಸಮಾಧಾನಗೊಂಡು ವೇದಿಕೆಯಲ್ಲೇ ಆಕ್ರೋಶ ವ್ಯಕ್ತಪಡಿಸಿದರು. ಇದ್ರಿಂದ ವೇದಿಕೆಯಲ್ಲಿದ್ದ ಸಿದ್ದರಾಮಯ್ಯಗೆ ಮುಜುಗರ ಉಂಟಾಯಿತು. ಬಿ.ಬಿ.ಚಿಮ್ಮನಕಟ್ಟಿ ಅವರನ್ನು ಸಮಾಧಾನಪಡಿಸುವಂತೆ ಪಕ್ಕದಲ್ಲಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರಿಗೆ ಹೇಳಿದರು.

Share Post