National

ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ ಸೇವೆ ಆರಂಭ

ಅಯೋಧ್ಯೆ; ಬೆಂಗಳೂರಿನಿಂದ ಅಯೋಧ್ಯೆಗೆ ಹೋಗಬೇಕಾದರೆ ರಸ್ತೆ ಮಾರ್ಗವಾಗಿಯೇ ಹೋಗಬೇಕಿತ್ತು. ಆದ್ರೆ ಇದೀಗ ಬೆಂಗಳೂರಿನಿಂದ ನೇರವಾಗಿ ವಿಮಾನದಲ್ಲಿ ಅಯೋಧ್ಯೆ ತಲುಬಹುದು. ಹೌದು,  ಇಂದಿನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ಅಯೋಧ್ಯೆಗೆ ವಿಮಾನ ಹಾರಾಟ  ಶುರುವಾಗಿದೆ.ದೇಶದ ವಿವಿಧ ನಗರಗಳಿಂದ ಅಯೋಧ್ಯೆಗೆ ತೆರಳುವ ವಿಮಾನಸೇವೆಗೆ ಚಾಲನೆ ನೀಡಲಾಗಿದೆ. ಅದರಲ್ಲಿ ಬೆಂಗಳೂರು-ಅಯೋಧ್ಯೆ ಮಾರ್ಗ ಕೂಡಾ ಒಂದು

ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಬೆಂಗಳೂರು-ಅಯೋಧ್ಯೆ, ಕೋಲ್ಕತ್ತಾ-ಅಯೋಧ್ಯೆ ನೇರ ವಿಮಾನಯಾನಕ್ಕೆ ಹಸಿರು ನಿಶಾನೆ ತೋರಿದರು. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವಿಮಾನ ಮೊದಲ ಬಾರಿಗೆ ಬೆಂಗಳೂರಿನಿಂದ ನೇರ ಅಯೋಧ್ಯೆಯನ್ನು ತಲುಪಿದೆ.

Share Post