CrimeDistrictsHealth

ಬೀಳಗಿ ಬಳಿ ಭೀಕರ ಅಪಘಾತ; ನಾಲ್ವರ ದುರ್ಮರಣ!

ಬಾಗಲಕೋಟೆ; ಬಾಗಲಕೋಟೆ ಜಿಲ್ಲೆ ಬೀಳಗಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ವ್ಯಕ್ತಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ತುಕಾರಾಮ್‌ ತಳೇವಾಡ, ಮಲ್ಲು ಪೂಜಾರಿ, ಕಲ್ಲು ಬವಟಗಿ, ಕಾಮಾಕ್ಷಿ ಬಡಿಗೇರ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು.

ಎಲ್ಲರೂ ಬಾದಾಮಿಯ ಬನಶಂಕರಿ ಜಾತ್ರೆಗೆ ಹೋಗಿ ವಾಪಸ್‌ ಬರುತ್ತಿದ್ದರು. ಈ ವೇಳೆ ಕಾರು ಅನಗವಾಡಿ ಬಳಿ ಬಂದಾಗ ನಿಯಂತ್ರಣ ತಪ್ಪಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಎಲ್ಲರು ಬಸವನಬಾಗೇವಾಡಿ ತಾಲ್ಲೂಕಿನ ಹೊನಗನಹಳ್ಳಿಯವರು ಎಂದು ತಿಳಿದುಬಂದಿದೆ.

 

Share Post