CrimeDistricts

ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಚಪ್ಪಲಿ ಹಾರ; ಸಿರವಾರದಲ್ಲಿ ಉದ್ವಿಗ್ನ ಸ್ಥಿತಿ

ರಾಯಚೂರು; ಕಿಡಿಗೇಡಿಗಳು ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದು, ಇದ್ರಿಂದಾಗಿ ಸ್ಥಳದಲ್ಲಿ ಉದ್ವಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಜನರು ರಸ್ತೆ ಸಂಚಾರ ಬಂದ್‌ ಮಾಡಲಾಗಿದ್ದು, ಟೈರ್‌ ಗಳ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. 

ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಟಿಪ್ಪು ಸರ್ಕಲ್​ ಇದೆ. ಇಲ್ಲಿ ಟಿಪ್ಪು ಭಾವಚಿತ್ರ ಇಡಲಾಗಿದೆ. ಅದಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇದರಿಂದ ಆಕ್ರೋಶಗೊಂಡ ಜನರು ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ರಾತ್ರಿ ವೇಳೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಬೆಳಗ್ಗೆ ಜನರು ನೋಡಿದಾಗಿ ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡುಬಂದಿದೆ ಇದರಿಂದಾಗಿ ಸಾವಿರಾರು ಜನರು ಸ್ಥಳದಲ್ಲಿ ಸೇರಿ, ಪ್ರತಿಭಟನೆ ಮಾಡುತ್ತಿದ್ದಾರೆ.

 

Share Post