BengaluruCrime

Bomb Blast; ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿದೆ; ಐಜಿಪಿ ಅಲೋಕ್‌ ಮೋಹನ್‌

ಬೆಂಗಳೂರು; ಇಂದು ಮಧ್ಯಾಹ್ನ ಬೆಂಗಳೂರಿನ ಇಂದಿರಾನಗರ ಬಳಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ  ಸಂಭವಿಸಿತ್ತು. ಇದರ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಸ್ಫೋಟ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ.. ಈ ನಡುವೆ ಡಿಜಿ ಐಜಿಪಿ ಅಲೋಕ್‌ ಮೋಹನ್‌  ಪರಿಶೀಲನೆ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದು ಸ್ಫೋಟಕವನ್ನು ಬ್ಲಾಸ್ಟ್‌ ಮಾಡಿದ್ದರಿಂದಲೇ  ಈ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಆದ್ರೆ ಯಾರಿಗೂ ತೀವ್ರ ಗಾಯಗಳಾಗಿಲ್ಲ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ಧಾರೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಎನ್‌ಐಎ ಹಾಗೂ ಐಬಿಗೆ ಮಾಹಿತಿ ನೀಡಿದ್ದೇವೆ ಎಂದೂ ಅಲೋಕ್‌ ಮೋಹನ್‌ ಹೇಳಿದ್ದಾರೆ.

ಎಫ್‌ಎಸ್‌ಎಲ್‌ ತಂಡದಿಂದ ತನಿಖೆ ನಡೆಸುತ್ತಿದೆ. ಇದನ್ನು ಯಾರು ಮಾಡಿದ್ದಾರೆ..? ಯಾಕೆ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯಲಿದೆ. ಈಗಲೇ ಎಲ್ಲವನ್ನೂ ಹೇಳೋದಕ್ಕೆ ಆಗೋದಿಲ್ಲ ಎಂದೂ ಐಜಿಪಿ ಅಲೋಕ್‌ ಮೋಹನ್‌ ಹೇಳಿದ್ದಾರೆ. ಗೃಹ ಸಚಿವರು ಹಾಗೂ ಸಿಎಂ ಅವರು ಕೂಡಾ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಇದೇ ವೇಳೆ ಅಲೋಕ್‌ ಮೋಹನ್‌ ತಿಳಿಸಿದ್ದಾರೆ.

 

Share Post