Districts

ಹವಾಮಾನ ವೈಪರೀತ್ಯ; ತಡವಾಗಿ ಲ್ಯಾಂಡ್‌ ಆದ ಬೊಮ್ಮಾಯಿ ವಿಮಾನ

ಹುಬ್ಬಳ್ಳಿ : ಬೆಂಗಳೂರಿನಿಂದ ಹುಬ್ಬಳ್ಳಿಗೆ ಇಂಡಿಗೋ ವಿಮಾನದಲ್ಲಿ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದರು. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ವಿಮಾನಕ್ಕೆ ಲ್ಯಾಂಡಿಂಗ್‌ ಸಮಸ್ಯೆ ಉಂಟಾಗಿದೆ.

೧೫ ನಿಮಿಷಗಳ ಕಾಲ ಹುಬ್ಬಳ್ಳಿಯಲ್ಲೇ ಸುತ್ತುತ್ತಾ, ಆಕಾಶದಲ್ಲೇ ಹಾರಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಸಿಎಂ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ಆಗಮಿಸುವಾಗ ಈ ಘಟನೆ ನಡೆದಿದೆ. ದಟ್ಟ ಮಂಜು ಇದ್ದ ಕಾರಣ ಈ ಸಮಸ್ಯೆ ಉಂಟಾಗಿದೆ.  ಸುಮಾರು ೭.೩೦ಕ್ಕೆ ಲ್ಯಾಂಡ್‌ ಆಗಬೇಕಿದ್ದ ವಿಮಾನ ಅರ್ಧ ಗಂಟೆ ತಡವಾಗಿ ಲ್ಯಾಂಡ್ ಆಗಿದೆ.

Share Post