BengaluruCrime

ಕೆಎಎಸ್‌ ಅಧಿಕಾರಿ ಪತ್ನಿ, ವಕೀಲೆ ಚೈತ್ರಾ ಬಿ.ಗೌಡ ಅನುಮಾನಾಸ್ಪದ ಸಾವು!

ಬೆಂಗಳೂರು; ಕೆಎಎಸ್‌ ಅಧಿಕಾರಿಯ ಪತ್ನಿ ಹಾಗೂ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.. ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.. 

ಹೈಕೋರ್ಟ್‌ ವಕೀಲೆಯಾಗಿರುವ ಚೈತ್ರಾ ಬಿ.ಗೌಡ (35) ಎಂಬುವವರೇ ಸಾವನ್ನಪ್ಪಿದವರು.. ಇವರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನ ಮೂಡಿದೆ.. ಚೈತ್ರಾ ಅವರುಅಣ್ಣಯ್ಯ ಲೇಔಟ್​ನಲ್ಲಿ ವಾಸವಿದ್ದು, ಅವರ ಪತಿ  ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಟಿಸೆಂಟ್ ಕಮೀಷನರ್ ಆಗಿದ್ದಾರೆ..

ಚೈತ್ರಾ ವಕೀಲರಾಗಿ ಕೆಲಸ ಮಾಡುತ್ತಿದ್ದು, ಮಾಡೆಲ್‌ ಆಗಿಯೂ ಗುರುತಿಸಿಕೊಂಡಿದ್ದಾರೆ.. ಇತ್ತೀಚೆಗೆ ದಂಪತಿ ನಡುವೆ ಕಲಹ ಉಂಟಾಗಿತ್ತು ಎಂದು ತಿಳಿದುಬಂದಿದೆ.. ಮೃತದೇಹವನ್ನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post