Districts

ಸುವರ್ಣಸೌಧಕ್ಕೆ ರೈತರು ಮುತ್ತಿಗೆ ಹಾಕಲು ಪ್ಲಾನ್‌

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿದೆ. ಈ ವೇಳೆ ರೈತರು ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಯಾಕಂದರೆ ಕೃಷಿ ತಿದ್ದುಪಡೆ ಕಾಯ್ದೆಯನ್ನು ಸರ್ಕಾರ ವಾಪಸ್‌ ತೆಗೆದುಕೊಳ್ಳಬೇಕು. ಈ ಬಗ್ಗೆ ಇಂದೇ ನಿರ್ಧಾರ ಕೈಗೊಳ್ಳಬೇಕೆಂದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಕಥೆ ಮಾಡಲು ನಾವು ಇಲ್ಲಿಗೆ ಬಂದಿಲ್ಲ, ಜೈಲಿಗೆ ಹಾಕಿದ್ರು ಹೆದರಲ್ಲ.
ಸರ್ಕಾರದ ಸಂದೇಶವೇನು ಎಂದು ಪೊಲೀಸರಿಂದ ಗೊತ್ತಾಗಬೇಕಾ..? ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೋಗಿರುವ ರೈತರನ್ನು ಪೊಲೀಸರು ತಡೆ ಹಿಡಿದಿರುವುದನ್ನ ಕಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Share Post