Bengaluru

ಪರಿಷತ್‌ನಲ್ಲೂ ಬಿಜೆಪಿಗೆ ಬಹುಮತ; ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ವಿಧಾನಪರಿಷತ್‌ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಅತ್ಯಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ. ಈ ಮೂಲಕ ವಿಧಾನಪರಿಷತ್‌ನಲ್ಲೂ ಬಿಜೆಪಿಯ ಬಹುಮತ ಸಿಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ ಅವರು, ಮತಎಣಿಕೆ ಕಾರ್ಯ ನಡೆಯುತ್ತಿದೆ. ನಿರೀಕ್ಷೆಯಂತೆ ಬಿಜೆಪಿಗೆ ಪೂರಕ ವಾತಾವರಣ ಕಾಣಿಸುತ್ತಿದೆ. ಬಿಜೆಪಿ ಪಕ್ಷ ಅತಿಹೆಚ್ಚು ಸ್ಥಾನದಲ್ಲಿ ಗೆಲ್ಲಲಿದ್ದು, ಪರಿಷತ್‌ನಲ್ಲಿ ನಮ್ಮ ಪಕ್ಷವೇ ಬಹುಮತ ಸಾಧಿಸಲಿದೆ ಎಂದು ಹೇಳಿದರು.

Share Post