CrimePolitics

ಎಸ್‌ಐಟಿ ವಿಚಾರಣೆಗೆ ಹಾಜರಾಗ್ತಾರಾ ಭವಾನಿ ರೇವಣ್ಣ..?; ವಿಚಾರಣೆಗೆ ಬಂದರೆ ಬಂಧನವಾಗುತ್ತಾ..?

ಬೆಂಗಳೂರು; ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆ ಎನ್ನಲಾಗ್ತಿರುವ ಕೆಆರ್‌ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರು ಪತ್ನಿ ಭವಾನಿ ರೇವಣ್ಣ ಅವರ ಬಂಧನವಾಗೋ ಸಾಧ್ಯತೆ ಇದೆ.. ಇಂದು ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗಲೇಬೇಕಿದ್ದು, ವಿಚಾರಣೆಗೆ ಹಾಜರಾದರೆ ಬಂಧನ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ..

ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.. ಇಂದಿಗೆ ಆದೇಶ ಕಾಯ್ದಿರಿಸಿದ್ದ ಕೋರ್ಟ್‌ ಇಂದು ಭವಾನಿ ರೇವಣ್ಣ ಅವರ ಅರ್ಜಿಯನ್ನು ವಜಾ ಮಾಡಿದೆ.. ಇದರಿಂದಾಗಿ ಭವಾನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ.. ಇನ್ನೊಂದೆಡೆ ಭವಾನಿ ರೇವಣ್ಣ ಅವರು ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ ಎನ್ನಲಾಗ್ತಿದೆ.. ಅವರು ಕೆಲ ದಿನಗಳಿಂದ ಹೊಳೆ ನರಸೀಪುರದ ಮನೆಯಲ್ಲೂ ಇಲ್ಲ, ಇತ್ತ ತವರು ಮನೆಯಲ್ಲೂ ಇಲ್ಲ.. ಹೀಗಾಗಿ ಅವರು ಎಲ್ಲಿ ಹೋಗಿದ್ದಾರೆ ಗೊತ್ತಿಲ್ಲ.. ಎಸ್‌ಐಟಿ ಎರಡನೇ ಬಾರಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ.. ಇಂದು ಅಂದರೆ ಜೂನ್‌ 1ರಂದು ಅವರು ವಿಚಾರಣೆಗೆ ಹಾಜರಾಗಬೇಕಿದೆ..

ಆದ್ರೆ ಅವ್ರು ಈಗ ಅಜ್ಞಾತ ಸ್ಥಳದಲ್ಲಿದ್ದಾರೆ.. ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ.. ಜೊತೆಗೆ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿರುವುದರಿಂದ ಭವಾನಿ ರೇವಣ್ಣ ಅವರಿಗೆ ಬಂಧನದ ಭೀತಿ ಇದೆ.. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗೋದು ಡೌಟು ಎಂದು ಹೇಳಲಾಗುತ್ತಿದೆ..

Share Post