Politics

ಪರಿಷತ್‌ ಚುನಾವಣೆ; ಸಿ.ಟಿ.ರವಿಗೆ ಒಲಿಯಿತು ಅದೃಷ್ಟ, ಸುಮಲತಾಗೆ ಸಿಗಲಿಲ್ಲ ಟಿಕೆಟ್‌!

ಬೆಂಗಳೂರು; ಮಂಡ್ಯ ಲೋಕಸಭಾ ಟಿಕೆಟ್‌ ಕೈತಪ್ಪಿದ್ದರಿಂದ ವಿಧಾನಪರಿಷತ್‌ಗೆ ಸುಮಲತಾ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು.. ಆದ್ರೆ, ಬಿಜೆಪಿ ಹೈಕಮಾಂಡ್‌ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದ್ದು, ಇದರಲ್ಲಿ ಸಿ.ಟಿ.ರವಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ..

11 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇದರಲ್ಲಿ ಮೂರು ಸ್ಥಾನಗಳಲ್ಲಿ ಗೆಲ್ಲುವ ಸಾಮರ್ಥ್ಯ ಬಿಜೆಪಿಗಿದೆ.. ಹೀಗಾಗಿ ಮೂವರು ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಲಾಗುತ್ತಿದೆ.. ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿರುವುದರಿಂದ ಇಂದು ಬಿಜೆಪಿ ಹೈಕಮಾಂಡ್‌ ಮೂವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.. ಮಾಜಿ ಸಚಿವ ಸಿ.ಟಿ ರವಿ, ಹಾಲಿ ಪರಿಷತ್‌ ಸದಸ್ಯ ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಟಿಕೆಟ್‌ ನೀಡಲಾಗಿದೆ..

 

 

Share Post