Politics

ರಾಜ್ಯದಲ್ಲಿ ನಾವು 15-20 ಸೀಟು ಗೆದ್ದೇ ಗೆಲ್ಲುತ್ತೇವೆ; ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು; ಬಹುತೇಕ ಸಮೀಕ್ಷೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ 5 ರಿಂದ 8 ಕ್ಷೇತ್ರಗಳಲ್ಲಷ್ಟೇ ಗೆಲ್ಲಲಿದೆ ಎಂದು ಹೇಳುತ್ತಿವೆ.. ಆದ್ರೆ ಕಾಂಗ್ರೆಸ್‌ ನಾಯಕರು ಮಾತ್ರ ಇದನ್ನು ಒಪ್ಪುತ್ತಿಲ್ಲ.. ಎಲ್ಲಾ ಸಮೀಕ್ಷೆಗಳೂ ಉಲ್ಟಾ ಆಗುತ್ತವೆ ಎಂದು ಹೇಳುತ್ತಿದ್ದಾರೆ.. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.. ನಮಗೆ ಸಮೀಕ್ಷೆಗಳ ಮೇಲೆ ನಂಬಿಕೆ ಇಲ್ಲ.. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 15 ರಿಂದ 20 ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ..

ನಮಗೆ ಸಂಪೂರ್ಣ ವಿಶ್ವಾಸ ಇದೆ.. ನಮ್ಮ ಯೋಜನೆಗಳಿಗೆ ರಾಜ್ಯದ ಮತದಾರ ಮನ್ನಣೆ ನೀಡಿದ್ದಾರೆ.. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 15-20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.. ನಿನ್ನೆ ಡಿ.ಕೆ.ಶಿವಕುಮಾರ್‌ ಕೂಡಾ ನಾವು ಡಬಲ್‌ ಡಿಜಿಟ್‌ ಬರಲಿದ್ದೇವೆ ಎಂದು ಹೇಳಿದ್ದರು..

Share Post