Politics

Bangalore Rural; ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ಗೆ ಸತತ ಎರಡನೇ ರೌಂಡ್‌ನಲ್ಲೂ ಮುನ್ನಡೆ

ಬೆಂಗಳೂರು; ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಾಕಷ್ಟು ಕುತೂಹಲ ಕೆರಳಿಸಿರುವ ಕ್ಷೇತ್ರ.. ಯಾಕಂದ್ರೆ, ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಡಾ.ಸಿ.ಎನ್.‌ಮಂಜುನಾಥ್‌ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.. ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್‌ ಕಣದಲ್ಲಿದ್ದಾರೆ.. ಹೀಗಾಗಿ ಇದು ಹೈವೋಲ್ಟೇಜ್‌ ಕ್ಷೇತ್ರವಾಗಿದೆ..

ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ  ಡಿ.ಕೆ.ಸುರೇಶ್‌ ಅವರು ಸತತ ಎರಡನೇ ರೌಂಡ್‌ನಲ್ಲೂ ಮುನ್ನಡೆ ಸಾಧಿಸಿದ್ದಾರೆ.. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕೊನೆಯ ಕ್ಷಣದವರೆಗೂ ಕುತೂಹಲ ಉಂಟು  ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ..

Share Post