HealthPolitics

ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ!

ಮೈಸೂರು; ಮಾಜಿ ಸಿಎಂ ಯಡಿಯೂರಪ್ಪ ಅವರ ಅತ್ಯಾಪ್ತ ಹಾಗೂ ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ನಿಧನರಾಗಿದ್ದಾರೆ.. ಒಮ್ಮೆ ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿದ್ದ ಕಾಪು ಸಿದ್ದಲಿಂಗಸ್ವಾಮಿ, ವರ್ಷದ ಹಿಂದೆ ನಡೆದ ವಿಧಾನಸಭಾ ಚುನಾವಣೆ ವೇಳೆ ವಿ.ಸೋಮಣ್ಣ ಪರವಾಗಿ ಕೆಲಸ ಮಾಡಿದ್ದರು.. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಪು ಸಿದ್ದಲಿಂಗಸ್ವಾಮಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ..

ಕಾರ್ಯ ಗ್ರಾಮದ ಕಾಪು ಸಿದ್ದಲಿಂಗಸ್ವಾಮಿಯವರು ಯಡಿಯೂರಪ್ಪ ಅವರು ಮೊದಲ ಬಾರಿ ಸಿಎಂ ಆಗಿದ್ದಾಗ ಹೆಚ್ಚಾಗಿ ಅವರ ಜೊತೆ ಗುರುತಿಸಿಕೊಂಡಿದ್ದರು.. ಯಡಿಯೂರಪ್ಪ ಅವರು ಕೆಜಿಪಿ ಕಟ್ಟಿದಾಗಲೂ ಅವರ ಜೊತೆ ಹೋಗಿದ್ದರು.. ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು..  ಆದ್ರೆ ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ ಕಾಪು ಸಿದ್ದಲಿಂಗಸ್ವಾಮಿ, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.. ಇತ್ತೀಚೆಗೆ ತುಮಕೂರಿನ  ನೂತನ ಸಂಸದ ವಿ.ಸೋಮಣ್ಣ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಸಿದ್ದಲಿಂಗಸ್ವಾಮಿಯವರ ಆರೋಗ್ಯ ವಿಚಾರಿಸಿದ್ದರು..

 

Share Post