BengaluruCrime

ಉಮಾಪತಿಗೌಡಗೆ ಬೆದರಿಕೆ ಹಾಕಿದ್ದ ದರ್ಶನ್‌ ಅಭಿಮಾನಿ ಅರೆಸ್ಟ್‌; ಉಳಿದವರಿಗೆ ಶುರುವಾಯ್ತು ಟೆನ್ಷನ್‌

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅರೆಸ್ಟ್‌ ಆಗಿದ್ದಾರೆ.. ಈ ವೇಳೆ ದರ್ಶನ್‌ ವಿರುದ್ಧ ಮಾತನಾಡಿದವರಿಗೆ ದರ್ಶನ್‌ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.. ಇದರ ಜೊತೆಗೆ ಪೊಲೀಸರು ದರ್ಶನ್‌ ಅಭಿಮಾನಿಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗಿತ್ತು.. ಇದೀಗ ಪೊಲೀಸರು ಕಾರ್ಯಾಚರಣೆಗಿಳಿದಿದ್ದಾರೆ.. ದರ್ಶನ್‌ ಅಭಿಮಾನಿಯೊಬ್ಬನನ್ನು ಬಂಧಿಸಲಾಗಿದೆ..

ಚಿತ್ರ ನಿರ್ಮಾಪಕ ಉಮಾಪತಿ ಗೌಡಗೆ ಬೆದರಿಕೆ ಹಾಕಿ ಅವಹೇಳಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ದರ್ಶನ್‌ ಅಭಿಮಾನಿ ಚೇತನ್‌ ಎಂಬಾತನನ್ನು ಬಂಧಿಸಲಾಗಿದೆ.. ಬಸವೇಶ್ವರ ನಗರ ಪೊಲೀಸರು ಅರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.. ಐಪಿಸಿ ಸೆಕ್ಷನ್ 504, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.. ಉಮಾಪತಿ ಈ ಕೇಸ್‌ ದಾಖಲು ಮಾಡಿದ್ದರು.. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ..

ಚೇತನ್‌ ಬಂಧನದ ಹಿನ್ನೆಲೆಯಲ್ಲಿ ದರ್ಶನ್‌ ಅಭಿಮಾನಿಗಳಿಗೆ ಭೀತಿ ಶುರುವಾಗಿದೆ..

 

Share Post