Politics

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದ MUDA ಹಗರಣ ಬಯಲಿಗೆ; ಕುಮಾರಸ್ವಾಮಿ

ಮೈಸೂರು; ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರಿಂದಲೇ

ಮುಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು ಪರೋಕ್ಷವಾಗಿ ಇದರ ಹಿಂದೆ ಡಿ. ಕೆ. ಶಿವಕುಮಾರ್ ಇದ್ದಾರೆ ಎಂದು ಹೇಳಿದ್ದಾರೆ..

  ಮೈಸೂರಿನ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮೇಲೆ ಅವರು ಮಾತನಾಡಿದರು..  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಇಷ್ಟು ದಿನ ಯಾಕೆ ಹೊರಗೆ ಬಂದಿರಲಿಲ್ಲ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯಿತು ಎಂದು ಲೇವಡಿ ಮಾಡಿದ್ದಾರೆ..

Share Post