BengaluruPolitics

ಜುಲೈ 27ರಿಂದ ಮೂರು ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ; ಸಹಕರಿಸಲು ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು; ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ 2024ರ ಜುಲೈ 27ರಿಂದ 2024ರ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದು, ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ; ಭಾರತದ ಈ ಗ್ರಾಮದಲ್ಲಿ 17 ಬ್ಯಾಂಕ್‌ಗಳಿವೆ, 5 ಸಾವಿರ ಕೋಟಿ ಡೆಪಾಸಿಟ್‌ ಮಾಡಿದ್ದಾರೆ!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿರು ಸಚಿವರು ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಅಪಾರ್ಟ್‌ಮೆಂಟ್‌ನಲ್ಲಿ 14 ಯುವಕರು, 6 ಯುವತಿಯರು!; ರೇವ್‌ ಪಾರ್ಟಿ ಮಾಡ್ತಿದ್ದವರು ಸಿಕ್ಕಿಬಿದ್ದಿದ್ದು ಹೇಗೆ..?

Share Post