DistrictsHealth

ಬಿಜೆಪಿ ಪಾದಯಾತ್ರೆ ವೇಳೆ ಮಹಿಳೆ ಸಾವು, ಮುಖಂಡ ಅಸ್ವಸ್ಥ!

ರಾಮನಗರ; ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿದ್ದಾರೆ.. ಹೃದಯಾಘಾತದಿಂದ ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಸಾವನ್ನಪ್ಪಿದ್ದಾರೆ.. ಚನ್ನಪಟ್ಟಣದಲ್ಲಿ ಪಾದಯಾತ್ರೆ ಮಾಡುತ್ತಿರುವ ವೇಳೆ ಗೌರಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; ನಿಮ್ಮ ಸಂಪಾದನೆ 25 ಸಾವಿರಕ್ಕಿಂತ ಕಡಿಮೆ ಇದ್ದರೂ ಕೋಟ್ಯಧಿಪತಿಗಳಾಗಬಹುದು..!

ಗೌರಮ್ಮ ಕುಸಿದುಬೀಳುತ್ತಿದ್ದಂತೆ ಅವರನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.. ಆದ್ರೆ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದರು.. ಆಸ್ಪತ್ರೆಗೆ ವಿಜಯೇಂದ್ರ, ನಿಖಿಲ್‌ ಕುಮಾರಸ್ವಾಮಿ ಭೇಟಿ ನೀಡಿ, ಕಾರ್ಯಕರ್ತೆಯ ಅಂತಿಮ ದರ್ಶನ ಪಡೆದರು..

ಇದನ್ನೂ ಓದಿ; ಬೈಕ್‌ಗೆ ಸರ್ಕಾರಿ ಬಸ್‌ ಡಿಕ್ಕಿ; ತುಮಕೂರಿನಲ್ಲಿ ವ್ಯಕ್ತಿ ಸಾವು!

ಇನ್ನೊಂದೆಡೆ ಬೆಂಗಳೂರಿನ ಜಯನಗರದ ಮಂಡಳ ಉಪಾಧ್ಯಕ್ಷ ಶಂಕರ್‌ ಅವರು ಕೂಡಾ ಪಾದಯಾತ್ರೆ ವೇಳೆ ತೀವ್ರ ಅಸ್ವಸ್ಥರಾಗಿದ್ದಾರೆ.. ಕೂಡಲೇ ಅವರನ್ನು ಅಂಬುಲೆನ್ಸ್‌ ಮೂಲಕ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.. ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ.. ಆಸ್ಪತ್ರೆಗೆ ವಿಜಯೇಂದ್ರ, ಸಿ.ಕೆ.ರಾಮಮೂರ್ತಿ ಹಾಗೂ ರವಿಸುಬ್ರಹ್ಮಣ್ಯ ಭೇಟಿ ನೀಡಿ ಶಂಕರ್‌ ಅವರ ಆರೋಗ್ಯ ವಿಚಾರಿಸಿದರು..

Share Post