CrimeDistricts

ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿದ್ದರಾಮಯ್ಯ ಅಭಿಮಾನಿ!

ಕಲಬುರಗಿ; ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ನಡೆದ ಹೋರಾಟದ ವೇಳೆ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.. ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹಿಂದ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.. ಈ ವೇಳೆ ಪ್ರತಿಭಟನಾಕಾರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ..

ಇದನ್ನೂ ಓದಿ; ಬಸ್‌ ನಿಲ್ದಾಣದಲ್ಲಿ ಕಣ್ಣು ಹೊಡೆದ ಕಾಮುಕ; ಚಾಮುಂಡಿಯಾಗಿ ಅಟ್ಟಾಡಿಸಿದ ಮಹಿಳೆ!

ಮುಡಾ ಹಾಗೂ ವಾಲ್ಮೀಕಿ ನಿಮಗದಲ್ಲಿನ ಹಗರಣದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿವೆ.. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿವೆ.. ಈ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಯಾಗಿ ಅಹಿಂದ ಸಂಘಟನೆಗಳು ಪ್ರತಿಭಟನೆಗಿಳಿದಿವೆ.. ಅದೇ ರೀತಿ ಕಲಬುರಗಿಯಲ್ಲಿ ಕೂಡಾ ಪ್ರತಿಭಟನೆ ನಡೆಯಿತು.. ಈ ವೇಳೆ ಸಿದ್ದರಾಮಯ್ಯ ಅಭಿಮಾನಿ ಷಣ್ಮುಖ ಸಿರಸಗಿ ಎಂಬಾ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಏಕಾಏಕಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ..

ಇದನ್ನೂ ಓದಿ; ಕುಡಿದುಬಂದು ತಾಯಿಯ ಮೇಲೇ ಅತ್ಯಾಚಾರ ಮಾಡಿದ ಪಾಪಿ ಮಗ!

ಈ ವೇಳೆ ಸ್ಥಳದಲ್ಲಿದ್ದವರು ಆತನಿಂದ ಕ್ಯಾನ್‌ ಹಾಗೂ ಬೆಂಕಿ ಪಟ್ಟಣದ ಕಸಿದುಕೊಂಡು ಆತನನ್ನು ರಕ್ಷಣೆ ಮಾಡಿದ್ದಾರೆ.. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು..

Share Post