CrimeDistricts

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ!

ಶಿವಮೊಗ್ಗ; ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆ ನಡೆದಿದೆ.. ಹೊಸನಗರ ತಾಲ್ಲೂಕಿನ ಮತ್ತಿಕೈ ವ್ಯಾಪ್ತಿಯ ಚಂಪಕಾಪುರದಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ಸಮಸ್ಯೆಯಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಬಂದಿದೆ; ಯಡಿಯೂರಪ್ಪ

ರಾಜೇಶ್‌ ಎಂಬುವವರ ಪತ್ನಿ ವಾಣಿ ಹಾಗೂ ಮಕ್ಕಳಾದ ಸಮರ್ಥ, ಸಂಪದ ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಸರಿಯಾದ ಕಾರಣ ಗೊತ್ತಾಗಿಲ್ಲ. ಕೌಟುಂಬಿಕ ಸಮಸ್ಯೆ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.. ಬಾವಿಯಿಂದ ಮೃತದೇಹಗಳನ್ನು ಮೇಲೆತ್ತಲಾಗಿದೆ.. ಘಟನೆಯಿಂದಾಗಿ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

ಇದನ್ನೂ ಓದಿ; ಮೆಟ್ರೋ ಫ್ಲೈಓವರ್‌ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ!

Share Post