CrimeDistrictsPolitics

ಸಿಎಂಗೆ ರಾಜೀನಾಮೆ ಬಿಟ್ಟು ಬೇರೆ ದಾರಿ ಇಲ್ಲ; ಜಗದೀಶ್‌ ಶೆಟ್ಟರ್‌

ಧಾರವಾಡ; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಚಾರಣೆ ಎದುರಿಸದೇ ಬೇರೆ ದಾರಿ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.. ಧಾರವಾಡದಲ್ಲಿ ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ..

ಸಿದ್ದರಾಮಯ್ಯ ಅವರು ತಪ್ಪು ಮಾಡಿದ್ದಾರೆ.. ಹೀಗಾಗಿ ಅವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದಾರೆ.. ಇದರ ವಿರುದ್ಧ ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದು ಸರಿಯಲ್ಲ.. ಅವರು ತಪ್ಪು ಮಾಡಿಲ್ಲ ಎಂದರೆ ವಿಚಾರಣೆ ಎದುರಿಸಲಿ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ..

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ಕಾಂಗ್ರೆಸ್‌ನಲ್ಲೇ ಹಲವು ನಾಯಕರಿಗೆ ಖುಷಿಯಾಗಿರುತ್ತೆ.. ಯಾರ್ಯಾರಿಗೆ ಖೂಷಿಯಾಗಿರುತ್ತೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ ಎಂದೂ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ..

 

Share Post