BengaluruHealth

ಸುದ್ದಿಗೋಷ್ಠಿ ವೇಳೆ ಕುಸಿದುಬಿದ್ದ ಸಿದ್ದರಾಮಯ್ಯ ಬೆಂಬಲಿಗ ಸಾವು!

ಬೆಂಗಳೂರು; ಮುಡಾ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಇದನ್ನು ವಿರೋಧಿಸಿ ಕೋಲಾರದ ಕುರುಬದ ಸಮಾಜದ ಮುಖಂಡರು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು.. ಈ ವೇಳೆ ಕುಸಿದುಬಿದ್ದು ಸಿದ್ದರಾಮಯ್ಯ ಬೆಂಬಲಿಗರೊಬ್ಬರು ಸಾವನ್ನಪ್ಪಿದ್ದಾನೆ.. ಕೋಪಾರದ ಕುರುಬ ಸಂಘದ ಮುಖಂಡ ಸಿ.ಕೆ.ರವಿಚಂದ್ರನ್‌ ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ..

ಇದನ್ನೂ ಓದಿ; ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಕುತ್ತಿಗೆಗೆ ಇರಿದುಕೊಂಡ ಬಾಲಕಿ!

ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ಕರೆಯಲಾಗಿತ್ತು.. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಿ.ಕೆ.ರವಿಚಂದ್ರನ್‌ ಅವರು ಅಲ್ಲಿಯೇ ಕುಸಿದುಬಿದ್ದಿದ್ದಾರೆ.. ಕೂಡಲೇ ಅವರನ್ನು ಕನ್ನಿಂಗ್‌ ಹ್ಯಾಮ್‌ ರಸ್ತೆಯ ಪೋರ್ಟಿಸ್‌ ಆಸ್ಪತ್ರೆಗೆ ದಾಖಲಿಸಲಾಯಿತು.. ಆದ್ರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ..

ಇದನ್ನೂ ಓದಿ; ಜಪ್ತಿ ಮಾಡಿದ್ದ 72 ಲಕ್ಷ ರೂ. ದುರ್ಬಳಕೆಮಾಡಿಕೊಂಡ ಪೊಲೀಸಪ್ಪ!

Share Post