CrimePolitics

ನಾಳೆಯೇ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪ್ರಕರಣದ ವಿಚಾರಣೆ

ಬೆಂಗಳೂರು; ನಾಳೆ ಆಗಸ್ಟ್‌ 29ನೇ ತಾರೀಖು.. ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್‌ ಅನುಮತಿ ವಿರುದ್ಧ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಲಿವೆ.. ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಯಾಗಿದೆ.. ನಾಳೆ ಹೈಕೋರ್ಟ್‌ ಏನು ಆದೇಶ ಕೊಡುತ್ತೆ ಎಂಬುದರ ಮೇಲೆ ಸಿದ್ದರಾಮಯ್ಯ ಭವಿಷ್ಯ ನಿಂತಿದೆ.. ಈ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ನಾಳಿನ ಹೈಕೋರ್ಟ್‌ ತೀರ್ಪಿನತ್ತ ನೆಟ್ಟಿದೆ..

ಇದನ್ನೂ ಓದಿ; ಐಸಿಸಿ ಅಧ್ಯಕ್ಷರಾಗಿ ಜಯ್‌ ಶಾ ಅವಿರೋಧ ಆಯ್ಕೆ!

ಸಿದ್ದರಾಮಯ್ಯ ಅವರ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರ ಮನವಿ ಮೇರೆಗೆ ಆಗಸ್ಟ್‌ 29ಕ್ಕೆ ವಿಚಾರಣೆ ಮುಂದೂಡಲಾಗಿತ್ತು.. ಜೊತೆಗೆ ಅಲ್ಲಿಯವರೆಗೆ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೂ ಯಾವುದೇ ಆದೇಶ ನೀಡಬಾರದು ಎಂದು ಹೇಳಲಾಗಿತ್ತು.. ಆಗಸ್ಟ್‌ 29ರಂದು ಅಂದರೆ ನಾಳೆ ಸಿದ್ದರಾಮಯ್ಯ ಅವರ ಪರವಾಗಿ ತೀರ್ಪು ಬರದೇ ಇದ್ದರೆ, ಸೆಪ್ಟೆಂಬರ್‌ 4ರಂದು ಜನಪ್ರತಿನಿಧಿಗಳ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡುವುದು ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ..
ಒಂದು ವೇಳೆ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದರೆ, ಸಿಎಂ ಸಿದ್ದರಾಮಯ್ಯ ವಿಚಾರಣೆ ಎದುರಿಸಬೇಕಾಗುತ್ತದೆ.. ಬಂಧನವಾಗುವ ಸಂದರ್ಭವೂ ಎದುರಾಗಬಹುದು.. ಹೀಗಾಗಿ ಅವರ ಸಿಎಂ ಸ್ಥಾನಕ್ಕೂ ಕುತ್ತುಂಟಡಾಗಬಹುದು ಎಂದು ಹೇಳಲಾಗುತ್ತಿದೆ.. ಒಂದು ವೇಳೆ ಹೈಕೋರ್ಟ್‌ ವ್ಯತಿರಿಕ್ತ ತೀರ್ಪು ನೀಡಿದರೂ, ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್‌ನಲ್ಲೂ ಪ್ರಶ್ನೆ ಮಾಡುವ ಅವಕಾಶವಿದೆ.. ಆದ್ರೂ ಕೂಡಾ ಭೀತಿ ಇದ್ದೇ ಇದೆ..

ಇದನ್ನೂ ಓದಿ; ಗರ್ಭ ಧರಿಸೋದಕ್ಕೆ ಭಾರತದ ಈ ಹಳ್ಳಿಗೆ ಬರ್ತಾರಂತೆ ಯೂರೋಪ್‌ ಮಹಿಳೆಯರು!

ಇನ್ನು ಮುಡಾ ಹಗರಣದಲ್ಲಿ ಕಾಂಗ್ರೆಸ್‌ ನಾಯಕರ ಪ್ರಕಾರ ಸಿದ್ದರಾಮಯ್ಯ ಅವರು ಯಾವ ತಪ್ಪೂ ಮಾಡಿಲ್ಲ.. ಒಂದು ತಪ್ಪಾಗಿದ್ದರೂ ಕೂಡಾ ಅದು ಬಿಜೆಪಿ ಆಡಳಿತದಲ್ಲಿರುವಾಗ ನಡೆದಿರೋದು.. ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್‌ಗಳನ್ನು ಹಂಚಿಕೆ ಮಾಡಿರುವುದು ಕೂಡಾ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿರುವುದು.. ಹೀಗಾಗಿ, ಆಗ ಅಧಿಕಾರದಲ್ಲಿದ್ದವರದ್ದು ತಪ್ಪಾಗುತ್ತೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ..
ಇದರ ಜೊತೆಗೆ ಯಾವುದಾದರೂ ತನಿಖಾ ಸಂಸ್ಥೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರೆ ರಾಜ್ಯಪಾಲರು ಕೊಡಬಹುದಿತ್ತು.. ಆದ್ರೆ ನನ್ನ ವಿರುದ್ಧ ತನಿಖೆಯೇ ನಡೆದಿಲ್ಲ.. ಖಾಸಗಿ ವ್ಯಕ್ತಿ ಮನವಿ ಮೇರೆಗೆ ಈ ಆದೇಶ ನೀಡಲಾಗಿದೆ.. ಇದು ರಾಜಕೀಯ ದುರುದ್ದೇಶ ಎಂದು ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ.. ಇದೇ ವಿಚಾರಗಳನ್ನು ಮುಂದಿಟ್ಟುಕೊಂಡು ಆಗಸ್ಟ್‌ 29ರಂದು ಅಭಿಷೇಕ್‌ ಮನು ಸಿಂಘ್ವಿ ಹಾಗೂ ಕಪಿಲ್‌ ಸಿಬಲ್‌ ಅವರು ಸಿದ್ದರಾಮಯ್ಯ ಅವರ ಪರವಾಗಿ ವಾದ ಮಂಡಿಸಲಿದ್ದಾರೆ.. ಇದನ್ನು ಕೋರ್ಟ್‌ ಪರಿಗಣಿಸಿದರೆ ಸಿದ್ದರಾಮಯ್ಯ ಅವರಿಗೆ ರಿಲೀಫ್‌ ಸಿಗಲಿದೆ..

ಇದನ್ನೂ ಓದಿ; ಪರೀಕ್ಷೆ ಬರೆಯಲು ಹೋದ ಗಂಡ; ಪ್ರಿಯಕರನನ್ನು ಕರೆಸಿಕೊಂಡ ಹೆಂಡತಿ!

ಇನ್ನು ವಿಚಾರ ಹೀಗಿರುವಾಗಲೇ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತೊಂದು ಹೋರಾಟಕ್ಕೆ ಕರೆ ನೀಡಿದ್ದಾರೆ.. ರಾಜಭವನ ಚಲೋಗೆ ಕಾಂಗ್ರೆಸ್‌ ತೀರ್ಮಾನ ಮಾಡಿದೆ.. ಆಗಸ್ಟ್‌ 31ರ ಶನಿವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಿಂದ ರಾಜಭವನದವರೆಗೆ ಮೆರವಣಿಗೆ ನಡೆಸಲು ಕಾಂಗ್ರೆಸ್‌ ತೀರ್ಮಾನ ಮಾಡಿದೆ.. ಇದರಲ್ಲಿ ಕಾಂಗ್ರೆಸ್‌ ಶಾಸಕರು, ಸಚಿವರು, ಪರಿಚತ್‌ ಸದಸ್ಯರು ಹಾಗೂ ಸಂಸದರು ಭಾಗವಹಿಸಲಿದ್ದಾರೆ..

 

Share Post