CrimeDistricts

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು!

ಮೈಸೂರು(Mysore); ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಈ ಬಗ್ಗೆ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ.. ಹೀಗಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಿಸಲಾಗಿದೆ.. ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಾ ಅವರು ನಕಲಿ ಸಹಿ ಬಳಸಿದ ಆರೋಪದ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ..

ಇದನ್ನೂ ಓದಿ; ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹೆಸರಲ್ಲೇ ವಂಚನೆ!

ಮುಡಾ ಸೈಟು ಹಂಚಿಕೆಯಲ್ಲಿನ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮೂಲ ಪತ್ರವನ್ನು ನಾಶ ಮಾಡಿದ್ದಾರೆ… ಇತ್ತೀಚೆಗೆ ಸೃಷ್ಟಿ ಮಾಡಿದ್ದ ಪತ್ರವನ್ನು ಕಡತಕ್ಕೆ ಸೇರ್ಪಡೆ ಮಾಡಲಾಗಿದೆ.. ಈ ಪತ್ರದಲ್ಲಿನ ಸಹಿಯಲ್ಲಿ ಒಂಬತ್ತು ವ್ಯತ್ಯಾಸಗಳು ಕಂಡು ಬಂದಿದೆ.. ನಾನು ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿಗೂ ಇದಕ್ಕೂ ಸಾಕಷ್ಟು ಬದಲಾವಣೆ ಇದೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ..

ಇದನ್ನೂ ಓದಿ; ಹಾವಿನ ಬಾಯಲ್ಲಿ ನಾಲಗೆ ಇಟ್ಟ ಯುವಕ!; ಮುಂದೇನಾಯ್ತು..?

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದಾಗ ಪತ್ರದಲ್ಲಿ ವೈಟ್ನರ್‌ ಹಿಂದಿನ ಅಕ್ಷರ ಇರುವುದನ್ನು ತೋರಿಸಲಾಗಿತ್ತು.. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ಆದ ಮೇಲೆ ವೈಟ್ನರ್‌ ಹಾಕಲಾಗಿತ್ತು.. ಆದ್ರೆ ಈಗ ಪತ್ರ ಬದಲಾಯಿಸಲಾಗಿದೆ.. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹಾಗೂ ಸಹಚರರು ಕೂಡಾ ಇದರಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧ ಕ್ರಮ ಆಗಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ..

Share Post