CrimeNational

ಪಲಮನೇರು ಬಳಿ ಬಸ್‌-ಲಾರಿ ಡಿಕ್ಕಿ; 8 ಮಂದಿ ದುರ್ಮರಣ!

ಚಿತ್ತೂರು(ಆಂಧ್ರಪ್ರದೇಶ); ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ.. ಲಾರಿ ಹಾಗೂ ಎಪಿಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿದ್ದು, 8 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಚಿತ್ತೂರು ಬಳಿಯ ಪಲಮನೇರು ಮಂಡಲ್‌ ಮೊಗಿಲಿ ಘಾಟ್‌ ರಸ್ತೆಯಲ್ಲಿ ಈ ದುರಂತ ನಡೆದಿದೆ..
ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅದನ್ನು ದಾಟಿ ಪಕ್ಕದ ರಸ್ತೆಗೆ ಬಂದು ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.. ಗಾಯಾಳುಗಳನ್ನು ಚಿತ್ತೂರು ಹಾಗೂ ಪಲಮನೇರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.. ಲಾರಿಯಲ್ಲಿ ಕಂಬಿಗಳನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ..
ವಿಷಯ ತಿಳಿಯುತ್ತಿದ್ದಂತೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.. ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ..

Share Post