BengaluruCrime

ಕಾಮಾಕ್ಷಿಪಾಳ್ಯದಲ್ಲಿ ಯುವಕ ಮೇಲೆ ಆಸಿಡ್‌ ದಾಳಿ!; ಕಾರಣ ಏನು..?

ಬೆಂಗಳೂರು; ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.. ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ಆಸಿಡ್‌ ದಾಳಿ ಮಾಡಿದೆ.. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ..
ನಾಗೇಶ್‌ ಎಂಬ ಯುವಕನ ಮೇಲೆ ಆಸಿಡ್‌ ದಾಳಿ ಮಾಡಿರುವ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.. ತೀವ್ರವಾಗಿ ಗಾಯಗೊಂಡಿರುವ ನಾಗೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.. ಘಟನೆಗೆ ಕಾರಣ ಇನ್ನೂ ಗೊತ್ತಾಗಿಲ್ಲ.. ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ..
ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಕೂಡಾ ಇಂತಹದ್ದೊಂದು ಆಸಿಡ್‌ ದಾಳಿ ನಡೆದಿತ್ತು.. ಪ್ರೀತಿಗೆ ನೋ ಎಂದಿದ್ದಕ್ಕೆ ನಾಗ ಎಂಬಾತ ಯುವತಿ ಮೇಲೆ ಆಸಿಡ್‌ ದಾಳಿ ಮಾಡಿದ್ದ.. ಯುವತಿ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ನಾಗ ಈ ದಾಳಿ ನಡೆಸಿ ಪರಾರಿಯಾಗಿದ್ದ.. ಕೆಲ ದಿನಗಳ ನಂತರ ಆತನನ್ನು ತಮಿಳುನಾಡಿನ ಆಶ್ರಮವೊಂದರಲ್ಲಿ ಬಂಧಿಸಲಾಗಿತ್ತು.. 2022ರಲ್ಲಿ ಈ ಪ್ರಕರಣ ನಡೆದಿತ್ತು.. ಇದೀಗ ಮತ್ತೆ ಇಂತಹದ್ದೇ ಒಂದು ಪ್ರಕರಣ ನಡೆದಿದ್ದು, ಕಾಮಾಕ್ಷಿಪಾಳ್ಯದ ಜನರನ್ನು ಬೆಚ್ಚಿಬೀಳಿಸಿದೆ..

Share Post