DistrictsPolitics

ಗೋಧ್ರಾ ವೇಳೆ ಮೋದಿ ರಾಜೀನಾಮೆ ಕೊಟ್ಟಿದ್ದರೇ..?; ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು; ನಾನು ಯಾವುದೇ ತಪ್ಪು ಮಾಡಿಲ್ಲ. ಈಗಾಗಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಬರೋದಿಲ್ಲ.. ನಾನು ರಾಜೀನಾಮೆ ಕೊಡೋದಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.. ,ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನನ್ನ ಮೇಲೆ ರಾಜಕೀಯ ಕೇಸ್‌ ಹಾಕಿದ್ದು ಇದೇ ಮೊದಲು. ಬಿಜೆಪಿ ಹಾಗೂ ಜೆಡಿಎಸ್‌ ಷಡ್ಯಂತ್ರದಿಂದ ಈ ಕೇಸ್‌ ಹಾಕಲಾಗಿದೆ ಎಂದು ಹೇಳಿದ್ದಾರೆ..
ಗೋಧ್ರಾ ಘಟನೆ ಸಂದರ್ಭದಲ್ಲಿ ಗುಜರಾತ್‌ನಲ್ಲಿ ನರೇಂದ್ರ ಮೋದಿಯವರೇ ಸಿಎಂ ಆಗಿದ್ದರು.. ಆದ್ರೆ ಅವರು ಆಗ ರಾಜೀನಾಮೆ ನೀಡಲಿಲ್ಲ.. ಅವರು ಆಗ ರಾಜೀನಾಮೆ ಕೊಟ್ಟಿದ್ದರೇ..? ರಾಜಕೀಯ ಕಾರಣಕ್ಕಾಗಿ ನನ್ನ ಮೇಲೆ ಆರೋಪ ಬಂದಿದೆ.. ನಾನು ತಪ್ಪು ಮಾಡಿಲ್ಲ. ಹಾಗಾಗಿ ನಾನು ರಾಜೀನಾಮೆ ನೀಡೋದಿಲ್ಲ.. ತನಿಖೆ ನಡೆಯಲಿ. ಅದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಸಿಎಮ ಸಿದ್ದರಾಮಯ್ಯ ಹೇಳಿದ್ದಾರೆ..
ಇನ್ನು ಸಿಬಿಐ ಅಧಿಕಾರ ಮೊಟಕುಗೊಳಿಸುವ ನಿರ್ಧಾರವನ್ನು ನಿನ್ನೆಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿತ್ತು.. ಇದನ್ನು ಕೂಡಾ ಸಿಎಂ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.. ಕೇಂದ್ರದಿಂದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಲಾಗ್ತಿದೆ.. ರಾಜಕೀಯ ದ್ವೇಷಕ್ಕಾಗಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.. ಹೀಗಾಗಿ ನಾವು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..
ಆಪರೇಷನ್‌ ಕಮಲ ಮಾಡಿ ನಮ್ಮ ಶಾಸಕರನ್ನು ಸೆಳೆಯುವಂತಹ ಪ್ರಯತ್ನ ನಡೆಯಿತು.. ಆದ್ರೆ ಅದು ಸಾಧ್ಯವಾಗಲಿಲ್ಲ.. ಹೀಗಾಗಿ, ಈ ರೀತಿಯಾಗಿ ಅವರು ರಾಜಕೀಯ ದ್ವೇಷ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..

Share Post