DistrictsPolitics

ಸಿದ್ದರಾಮಯ್ಯರ ಈ ಸ್ಥಿತಿಗೆ ಅವರ ಆಪ್ತ ಮರಿಗೌಡ ಕಾರಣವಾ..?

ಮೈಸೂರು; ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕಾನೂನು ಸಂಕಷ್ಟ ಎದುರಿಸುತ್ತಿದ್ದಾರೆ.. ಮೈಸೂರು ಲೋಕಾಯುಕ್ತದಲ್ಲಿ ಇವತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗುತ್ತಿದೆ.. ಹೀಗಿರುವಾಗಲೇ ಸಿದ್ದರಾಮಯ್ಯ ಆಪ್ತ ಮರಿಗೌಡ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.. ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಕ್ಕೆ ಸಿಎಂ ಸಿದ್ದರಾಮಯ್ಯರನ್ನು ಸ್ವಾಗತಿಸಲು ಮರಿಗೌಡ ಬಂದಿದ್ದರು.. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಈ ಸ್ಥಿತಿ ನೀನೇ ಕಾರಣ ಎಂದು ಮರಿಗೌಡಗೆ ಕಾಂಗ್ರೆಸ್‌ ಕಾರ್ಯಕರ್ತರು ಘೇರಾವ್‌ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ ಎಂದರೆ ಅದಕ್ಕೆ ನೀವೇ ಕಾರಣ.. ನಿಮ್ಮಿಂದಲೇ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಕಾರ್ಯಕರ್ತರು, ಮರಿಗೌಡ ಅವರನ್ನು ಕಾರು ಹತ್ತಿಸಿ ವಾಪಸ್‌ ಕಳುಹಿಸಿದ್ದಾರೆ.. ಇದಕ್ಕೂ ಮೊದಲು ಮರಿಗೌಡ ಅವರು ಕಾರ್ಯಕರ್ತರನ್ನು ಸಮಾಧಾನ ಮಾಡಲು ಯತ್ನಿಸಿದ್ದಾರೆ.. ಸಮಜಾಯಿಷಿ ನೀಡಲು ಹೋಗಿದ್ದಾರೆ.. ಆದ್ರೆ ಯಾರೂ ಕೇಳಿಲ್ಲ.. ಅವಾಚ್ಯ ಶಬ್ದಗಳಿಂದ ಅವರನ್ನು ನಿಂದನೆ ಮಾಡಿದ್ದಾರೆ.. ನಿನ್ನ ಭಾಷಣ ನಮಗೆ ಬೇಡ ಹೊರಡು ಎಂದಿದ್ದಾನೆ.. ಬಲವಂತವಾಗಿ ಕಾರು ಹತ್ತಿಸಿ ಅವರನ್ನು ಕಳುಹಿಸಲಾಗಿದೆ..

Share Post