CrimePolitics

ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ; ಜಿಲ್ಲಾಧ್ಯಕ್ಷರ ಮೇಲೆ ಹಲ್ಲೆ!

ಕೋಲಾರ; ಕೋಲಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.. ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ನಡೆದ ಸಭೆ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು ಕೈಕೈ ಮಿಲಾಯಿಸಿದ್ದಾರೆ..

  ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರ ನಡುವೆ ಈ ಗಲಾಟೆ ನಡೆದಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಚುನಾವಣೆಯಲ್ಲಿ ಕೆಲಸ ಮಾಡಿದವರನ್ನು ವೇದಿಕೆ ಮೇಲೆ ಕೂರಿಸಿದ್ದಾರೆಂದು ಕೆಲವರು ಕ್ಯಾತೆ ತೆಗೆದಿದ್ದಾರೆ.. ಇದರಿಂದ ಶುರುವಾದ ಗಲಾಟೆ ಕೈಕೈ ಮಿಲಾಯಿಸುವವರೆಗೂ ಹೋಗಿದೆ..

  ಕೆಲ ಕಾರ್ಯಕರ್ತರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಮೇಲೆ ಕೈ ಮಾಡಿದ್ದಾರೆ. ಜೊತೆಗೆ ಅವರನ್ನು ಸಭೆಯಿಂದ ಹೊರ ತಳ್ಳಿದ್ದಾರೆ. ಇನ್ನು ಈ ಸಭೆಯಲ್ಲಿ ಶಾಸಕರಾದ ಕೊತ್ತೂರು ಮಂಜುನಾಥ್, ನಂಜೇಗೌಡ, ಕೋಲಾರ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಭಾಗಿಯಾಗಿದ್ದರು.

Share Post