DistrictsPolitics

ಜನರ ಆಯ್ಕೆಯ ಸರ್ಕಾರ ಕಿತ್ತುಹಾಕುವುದು ಪ್ರಜಾಪ್ರಭುತ್ವ ವಿರೋಧಿ; ಸಿದ್ದರಾಮಯ್ಯ

ಮೈಸೂರು; ಜನರು ಆಯ್ಕೆ ಮಾಡಿ ಕಳುಹಿಸಿದ ಚುನಾಯಿತ ಸರ್ಕಾರವನ್ನು ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶದಿಂದ ಹೇಳಿದ್ದಾರೆ.. ಚಾಮುಂಡಿ ಬೆಟ್ಟದಲ್ಲಿ ಇಂದು ಮೈಸೂರು ದಸರಾ ಉದ್ಘಾಟನೆ ಮಾಡಿ ಅವರು ಮಾತನಾಡಿದರು..
ರಾಜ್ಯದ ಜನರು ಕಾಂಗ್ರೆಸ್‌ ಪಕ್ಷ ಆಶೀರ್ವಾದ ಮಾಡಿದ್ದಾರೆ.. ನಮಗೆ 136 ಸ್ಥಾನಗಳನ್ನು ಜನ ಕೊಟ್ಟಿದ್ದಾರೆ.. 5 ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ನಾವು ಪ್ರಯತ್ನ ಮಾಡುತ್ತಿದ್ದೇವೆ.. ಆದ್ರೆ ಜನರು ಕೊಟ್ಟ ಸ್ಪಷ್ಟ ಬಹುಮತದ ಸರ್ಕಾರವನ್ನು ಉರುಳಿಸಲು ಪ್ರಯತ್ನ ಮಾಡುವುದು ಪ್ರಜಾಪ್ರಭುತ್ವದ ವಿರೋಧಿ ಕೆಲಸ ಎಂದು ಸಿದ್ದರಾಮಯ್ಯ ಅವರು ಹೇಳಿದರು..
ನಾನು ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ.. ಆತ್ಮಸಾಕ್ಷಿಗೆ ಅನುಗುಣವಾಗಿ ನಾವು ನಡೆದುಕೊಳ್ಳುತ್ತಿದ್ದೇನೆ.. ಜನರ ಆಶೀರ್ವಾದ ಇರುವವರೆಗೂ ಯಾರೂ ಏನೂ ಮಾಡುವುದಕ್ಕೆ ಆಗುದಿಲ್ಲ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು..

Share Post