DistrictsPolitics

ಸಿಎಂ ಯಾಕೆ ರಾಜೀನಾಮೆ ಕೊಡಬೇಕು; ಸಿದ್ದರಾಮಯ್ಯ ಬೆನ್ನಿಗೆ ನಿಂತ ಜಿ.ಟಿ.ದೇವೇಗೌಡ!

ಮೈಸೂರು; ಜೆಡಿಎಸ್‌ ನಾಯಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಅವರ ಪರ ನಿಂತಿದ್ದಾರೆ.. ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ನೀಡಬೇಕು.. ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಾದಿಸುತ್ತಾ ಹೋದರೆ ಎಲ್ಲಾ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾಗಿ ಬರುತ್ತದೆ. ಅದು ಸಾಧ್ಯವಾಗುತ್ತಾ ಎಂದು ಜಿ.ಟಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ..
ಚಾಮುಂಡಿ ಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಜಿ.ಟಿ.ದೇವೇಗೌಡರು, ವೇದಿಕೆಯಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಅವರ ಪರ ವಹಿಸಿ ಮಾತನಾಡಿದರು.. ಸಿದ್ದರಾಮಯ್ಯ ಅವರು ಪತ್ನಿ ಆರೋಪ ಬಂದ ಹಿನ್ನೆಲೆಯಲ್ಲಿ ಸೈಟ್‌ಗಳನ್ನು ವಾಪಸ್‌ ಕೊಟ್ಟಿದ್ದಾರೆ.. 50:50 ಅನುಪಾತದಲ್ಲಿ ಸೈಟ್‌ ಹಂಚಿಕೆ ಮಾಡಲಾಗಿತ್ತು.. ಇದು ಕಾನೂನುಬದ್ಧವಾಗಿಯೇ ಇತ್ತು ಎಂದು ಜಿ.ಟಿ.ದೇವೇಗೌಡರು ಹೇಳಿದ್ದಾರೆ.. ತನಿಖೆ ನಡೆಯುತ್ತಿದೆ ನಡೆಯಲಿ, ಎಲ್ಲದಕ್ಕೂ ಸಿದ್ದರಾಮಯ್ಯ ಹೇಗೆ ಕಾರಣರಾಗುತ್ತಾರೆ ಎಂದು ಜಿ.ಟಿ.ದೇವೇಗೌಡರು ಪ್ರಶ್ನೆ ಮಾಡಿದರು.
ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.. ಅವರೂ ಕೂಡಾ ರಾಜೀನಾಮೆ ಕೊಡುವ ಅಗತ್ಯ ಬರುವುದಿಲ್ಲ.. ಸಿಎಂ ಸಿದ್ದರಾಮಯ್ಯ ಅವರು ಕೂಡಾ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಜಿಟಿಡಿ ಇದೇ ವೇಳೆ ಹೇಳಿದರು..

Share Post