BengaluruPolitics

ಎಲ್ಲರಿಗೂ ಸಿಎಂ ಆಗುವ ಆಸೆ ಇರುತ್ತದೆ; ಸತೀಶ್‌ ಜಾರಕಿಹೊಳಿ

ಬೆಂಗಳೂರು; ಎಲ್ಲಾ ನಾಯಕರಿಗೂ ಕೂಡಾ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ.. ಆದ್ರೆ ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂಬರ್ಥದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಅವರು, ಎಲ್ಲರಿಗೂ ಸಿಎಂ ಆಗುವ ಆಸೆ ಇರುತ್ತದೆ. ಆದ್ರೆ ಸದ್ಯಕ್ಕೆ ಅಂತಹ ರೇಸ್‌ ಕಾಂಗ್ರೆಸ್‌ನಲ್ಲಿ ಇಲ್ಲ. ಸಿದ್ದರಾಮಯ್ಯ ಅವರ ರಾಜೀನಾಮೆಯ ಪ್ರಶ್ನೆ ಸದ್ಯಕ್ಕಿಲ್ಲ ಎಂದು ಅವರು ಹೇಳಿದ್ದಾರೆ..
ಪಕ್ಷದಲ್ಲಿ ಯಾವುದೇ ಮುಸುಕಿನ ಗುದ್ದಾಟವಿಲ್ಲ.. ಸಿದ್ದರಾಮಯ್ಯ ಅವರು ಸಿಎಂ ಆಗಿಯೇ ಮುಂದುವರೆಯುತ್ತಾರೆ.. ಮುಡಾ ಹಗರಣ ತನಿಖೆಯಾಗಬೇಕು.. ತನಿಖೆಯ ನಂತರ ನಿಜ ಏನು ಅನ್ನೋದು ಗೊತ್ತಾಗುತ್ತದೆ.. ಸಿದ್ದರಾಮಯ್ಯ ಅವರು ಈಗಲೂ ಸಿಎಂ, ಮುಂದೆಯೂ ಸಿಎಂ ಆಗಿರುತ್ತಾರೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.. ಯಾವುದೇ ವಿಚಾರ ಆಗಲೀ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ. ಯಾರೊಬ್ಬರ ವೈಯುಕ್ತಿಕ ತೀರ್ಮಾನ ಆಗುವುದಿಲ್ಲ. ಹೈಕಮಾಂಡ್‌ ಸಿದ್ದರಾಮಯ್ಯ ಅವರ ಬೆನ್ನಿಗಿದೆ ಎಂದು ಸತೀಶ್‌ ಜಾರಕಿಹೊಳಿ ಇದೇ ವೇಳೆ ಹೇಳಿದ್ದಾರೆ..

 

Share Post