NationalPolitics

ನನ್ನ ಕೊಲೆಗೆ ಸ್ಕೆಚ್‌ ಹಾಕಿದ್ದರು; ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಅಮರಾವತಿ; ನನ್ನ ಕೊಲೆ ಮಾಡುವುದಕ್ಕೆ ಸಂಚು ನಡೆದಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಗಂಭೀರ ಆರೋಪ ಮಾಡಿದ್ದಾರೆ.. ಈ ಬಗ್ಗೆ ಮಾತನಾಡಿರುವ ಅವರು, ನಾನು ಜೈಲಿನಲ್ಲಿದ್ದಾಗ ನನ್ನ ಕೊಲೆಗೆ ಯತ್ನ ನಡೆದಿತ್ತು.. ಜೈಲಿನ ಮೇಲೆ ಡ್ರೋನ್‌ಗಳನ್ನು ಹಾರಿಸುತ್ತಿದ್ದರು.. ಸಿಟಿಟಿವಿಗಳನ್ನು ಅಳವಡಿಸಿ ನನ್ನ ಚಲನವಲನ ಮಾನಿಟರಿಂಗ್‌ ಮಾಡಲಾಗುತ್ತಿತ್ತು ಎಂದು ಆರೋಪ ಮಾಡಿದ್ದಾರೆ..
ಹಿಂದಿನ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಸಿಪಿ ಸರ್ಕಾರ ನನ್ನನ್ನು ತುಂಬಾ ಕೆಟ್ಟದಾಗಿ ನಡೆಸಿಕೊಂಡಿತ್ತು.. ಎಲ್ಲರಿಗಿಂತ ಹೆಚ್ಚಾಗಿ ನಾನೇ ಕಿರುಕುಳಕ್ಕೆ ಒಳಗಾಗಿದ್ದೆ.. ಜೈಲಿನಲ್ಲಿದ್ದಾಗ ನನ್ನನ್ನು ಇಲ್ಲವಾಗಿಸುವ ಪ್ರಯತ್ನ ನಡೆದಿತ್ತು.. ಅದಕ್ಕಾಗಿಯೇ ಜೈಲಿನ ಮೇಲೆ ಡ್ರೋನ್‌ಗಳ ಹಾರಾಟ ಮಾಡಲಾಗಿತ್ತು.. ಆದ್ರೆ ನಾವು ಎಂದಿಗೂ ಸೇಡು ತೀರಿಸಿಕೊಳ್ಳುವ ಪ್ರಯತ್ನ ಮಾಡುವುದಿಲ್ಲ.. ಸೇಡು ತೀರಿಸಿಕೊಳ್ಳುವುದಕ್ಕಾಗಿ ನಾವು ಅಧಿಕಾರಕ್ಕೆ ಬಂದಿಲ್ಲ.. ಜನರ ಪರವಾಗಿ ಕೆಲಸ ಮಾಡಲು ಬಂದಿದ್ದೇವೆ..
ಸೋಷಿಯಲ್‌ ಮೀಡಿಯಾ ಮೂಲಕ ನಮ್ಮ ಸರ್ಕಾರದ ವಿರುದ್ಧ ಕೆಟ್ಟದಾಗಿ ಪ್ರಚಾರ ಮಾಡಲಾಗುತ್ತಿದೆ.. ಆದ್ರೆ ನಮ್ಮ ಸರ್ಕಾರದ ಉದ್ದೇಶಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ.. ಜನರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ..

Share Post